News Karnataka Kannada
Friday, May 03 2024
ಬೆಂಗಳೂರು

ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ

Bengaluru: Several rules have been put in place for Ganesha festival.
Photo Credit :
ಬೆಂಗಳೂರು : ಕೊರೋನಾ ಕಾರಣದಿಂದಾಗಿ  ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಬಗ್ಗೆ ಕೊನೆಗೂ ಸರ್ಕಾರ ತನ್ನ ಅಂತಿಮ ನಿರ್ಧಾರವನ್ನು ಪ್ರಕಟಿಸಿದೆ.
ತಜ್ಞರ ಜೊತೆ ಇಂದು ನಡೆದ  ಸಭೆಯಲ್ಲಿ   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತು ಬದ್ಧ ಅನುಮತಿ ನೀಡಿದ್ದಾರೆ.
ಸಾರ್ವಜನಿಕ ಗಣೇಶೋತ್ಸವಕ್ಕೆ ಏನೋ ರಾಜ್ಯ ಸರ್ಕಾರ  ಗ್ರೀನ್ ಸಿಗ್ನಲ್ ನೀಡಿದೆ. ಆದ್ರೆ, ಅದಕ್ಕೆ ತಕ್ಕಂತೆ ನಿಯಮಗಳನ್ನ ರೂಪಿಸಿದೆ. ಇನ್ನು ಗಣೇಶ ಹಬ್ಬಕ್ಕೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದ್ದು, ಅದು ಈ ಕೆಳಗಿನಂತಿವೆ.
ಸರ್ಕಾರದ ಮಾರ್ಗಸೂಚಿ ಈ ಕೆಳಗಿಂನಂತಿದೆ
*ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್
* ಗಣೇಶ ಮೂರ್ತಿ 4 ಅಡಿಗಿಂತ ಹೆಚ್ಚು ಇರಬಾರದು.
* ಗಣೇಶ ಮೂರ್ತಿಯನ್ನು 5 ದಿನದೊಳಗೆ ವಿಸರ್ಜನೆ ಮಾಡಬೇಕು.
* ನಗರಗಳಲ್ಲಿ ವಾರ್ಡ್ ಗೆ ಒಂದು ಮಾತ್ರ ಗಣೇಶ ಮೂರ್ತಿ ಇಡಬಹುದು.
* ಗ್ರಾಮಕ್ಕೊಂದು ಸ್ಥಳೀಯ ಆಡಳಿತದ ಅನುಮತಿಯ ಮೇರೆಗೆ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು.
* ಕೋವಿಡ್ ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಕಡಿಮೆ ಇದ್ದಲ್ಲಿ ಮಾತ್ರ ಅವಕಾಶ ನೀಡಲಾಗುವುದು. ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಿರುವ ಕಡೆಗಳಲ್ಲಿ ಗಣೇಶೋತ್ಸವ ನಡೆಸಲು ಅವಕಾಶ ಇಲ್ಲ.
* ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸ್ಥಳಗಳಲ್ಲಿ ಕೋವಿಡ್ ಲಸಿಕಾ ಕ್ಯಾಂಪ್ ನಡೆಸಲಾಗುವುದು. 50 ಅಡಿಗಿಂತ ಹೆಚ್ಚು ಪೆಂಡಾಲ್ ಹಾಕುವಂತಿಲ್ಲ
*ಗಣೇಶೋತ್ಸವ ಸಮಯದಲ್ಲಿ ಮನರಂಜನೆ, ಡಿಜೆ ಗಳಿಗೆ ಅವಕಾಶವಿಲ್ಲ. ಯಾವುದೇ ಮೆರವಣಿಗೆಗೂ ಅವಕಾಶವಿಲ್ಲ.
* ಶಾಲಾ ಕಾಲೇಜುಗಳಲ್ಲಿ ಗಣೇಶ ಕೂರಿಸುವಂತಿಲ್ಲ.
* ಏಕಕಾಲಕ್ಕೆ 20 ಜನರಿಗಿಂತ ಹೆಚ್ಚಿನ ಜನರು ಸೇರುವಂತಿಲ್ಲ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು