News Karnataka Kannada
Friday, May 03 2024
ಬೆಂಗಳೂರು

ಸಿಂದಗಿಯಲ್ಲಿ ನಮ್ಮ‌ನಿರೀಕ್ಷೆ ಹುಸಿಯಾಗಿದೆ : ಸಿದ್ದರಾಮಯ್ಯ

Siddaramaih
Photo Credit :

ಬೆಂಗಳೂರು : ಸಿಂದಗಿಯಲ್ಲಿ ನಮ್ಮ‌ನಿರೀಕ್ಷೆ ಹುಸಿಯಾಗಿದೆ. ಅಲ್ಲಿ ತೀವ್ರ ಸ್ಪರ್ಧೆಯನ್ನು ನಿರೀಕ್ಷಿಸಿದ್ದೆವು. ಆದರೆ ದೊಡ್ಡ ಅಂತರದಲ್ಲಿ‌ ಸೋತಿದ್ದೇವೆ. ಆದರೆ ಕಳೆದ ಬಾರಿ ನಾವು ‌ಮೂರನೇ ಸ್ಥಾನದಲ್ಲಿದ್ದೆವು, ಈಗ ಎರಡನೇ ಸ್ಥಾನಕ್ಕೆ ಬಂದಿದ್ದೇವೆ. ಸೋಲನ್ನು ಒಪ್ಪಿಕೊಳ್ಳಬೇಕು. ನಮ್ಮ ಅಭ್ಯರ್ಥಿ ಅಶೋಕ್ ಮನಗೂಳಿ ಜೆಡಿಎಸ್ ನಿಂದ ಬಂದವರು. ಅವರಿಗೆ ನಾವು ಟಿಕೆಟ್ ಕೊಟ್ಟಿದ್ದೆವು. ಆದರೆ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರಿಗೆ ಹೊಂದಾಣಿಕೆಯಾಗಿಲ್ಲ, ಅವರ ಜೊತೆ ಬಂದ ಜೆಡಿಎಸ್ ಕಾರ್ಯಕರ್ತರ ಜೊತೆ ಹೊಂದಾಣಿಕೆಯಾಗಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾನಗಲ್ ನಲ್ಲಿ ನಿರೀಕ್ಷಿತ ಫಲಿತಾಂಶ ಬಂದಿದೆ. 10 ರಿಂದ 13 ಸಾವಿರದಲ್ಲಿ‌ಗೆಲ್ಲುತ್ತೇವೆ ಎಂದುಕೊಂಡಿದ್ದೆವು. ನಮ್ಮ ಅಭ್ಯರ್ಥಿ ಮಾನೆ ಬಗ್ಗೆ ಜನರಲ್ಲಿ ಉತ್ತಮ ಅಭಿಪ್ರಾಯವಿತ್ತು ಎಂದರು.

ಹಾನಗಲ್ ನಲ್ಲಿ ಬೊಮ್ಮಾಯಿ ಒಂದು ವಾರ ಪ್ರಚಾರ ಮಾಡಿದ್ದರು. ಅವರದ್ದು ಶಿಗ್ಗಾಂವ್, ಅದರ ಪಕ್ಕದಲ್ಲಿ ಹಾನಗಲ್. ಅಧಿಕಾರ ದುರುಪಯೋಗ, ಹಣ ಹಂಚಿದರು. ಆದರೂ ಅವರು ಅಲ್ಲಿ ಸೋತಿದ್ದಾರೆ. ಜನ ಇವತ್ತು ಬದಲಾವಣೆ ಬಯಸಿದ್ದಾರೆ. ಇದು ಮುಂದಿನ ಚುನಾವಣೆ ದಿಕ್ಸೂಚಿಯೆಂದು ನಾನು ಹೇಳಲ್ಲ ಆದರೆ ಜನರ ಎಚ್ಚರಿಕೆಯ ಗಂಟೆ. ರಾಜ್ಯದಲ್ಲಿ ಜನ ಬದಲಾವಣೆ ಬಯಸುತ್ತಿದ್ದಾರೆ ಎಂದರು.

ಸಿಂದಗಿಯಲ್ಲಿ ಅಭ್ಯರ್ಥಿ ಪ್ರಬಲರಿದ್ದರು. ಆದರೆ ಕಾರ್ಯಕರ್ತರ ಹೊಂದಾಣಿಕೆ ಇರಲಿಲ್ಲ. ಹಾಗಂತ ಅಲ್ಲಿ ಕಾರ್ಯಕರ್ತರು ಹೇಳುತ್ತಿದ್ದರು ಎಂದರು. ದೇಶದ 30 ಕ್ಷೇತ್ರಗಳಲ್ಲಿ ಬೈ ಎಲೆಕ್ಷನ್ ನಡೆದಿದೆ. ಎಂಟರಲ್ಲಿ ಮಾತ್ರ ಬಿಜೆಪಿ ಗೆದ್ದಿದೆ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ಉಳಿದ ಕಡೆ ಬೇರೆಯವರು ಗೆದ್ದಿದ್ದಾರೆ. ದೇಶದಲ್ಲಿ ಜನ ಬದಲಾವಣೆ ಬಯಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಜೆಡಿಎಸ್ ಠೇವಣಿ ಕಳೆದುಕೊಂಡ ವಿಚಾರದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಕೋಮುವಾದಿ ಪಕ್ಷದ ಜೊತೆ ಸೇರಿದ್ದಾರೆಂದು ನಾನು ಮೊದಲೇ ಹೇಳಿದ್ದೆ. ಈಗ ಎರಡೂ ಕಡೆ ಠೇವಣಿ ಕಳೆದುಕೊಂಡಿದ್ದಾರೆ. ನಾನು ಜೆಡಿಎಸ್ ಬಗ್ಗೆ ಮಾತನಾಡಲ್ಲ. ಮುಂದಿನ ಚುನಾವಣೆಯಲ್ಲೂ ಇದೇ ಆಗಲಿದೆ ಎಂದು ಹೇಳಿದರು.

ಬಿಜೆಪಿ ಅವನತಿ ಶುರುವಾಗಿದೆ. 2023 ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಸಿಎಂ ಯಾರು ಎನ್ನುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ನಾನು ಸಿಎಂ ಆಗುವ ಆಕಾಂಕ್ಷೆ ಬಿಟ್ಟುಬಿಟ್ಟಿದ್ದೇನೆ ಎಂದಲ್ಲ, ಆದರೆ ಶಾಸಕರು ಒಪ್ಪಬೇಕಲ್ಲ ಎಂದು ಪರೋಕ್ಷ ಸೂಚನೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು