ಸ್ಯಾಂಡಲ್ ವುಡ್ ನಟ ಪುನೀತ್ ರಾಜಕುಮಾರ್ ಅಂತಿಮ ದರ್ಶನಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ತೆಲುಗು ನಟ ಬಾಲಕೃಷ್ಣ, ಪ್ರಭುದೇವ ಪುನೀತ್ ಗೆ ಅಂತಿಮ ವಿದಾಯ ಹೇಳಿದ್ದಾರೆ.
ಇಂದು ಹೈದರಾಬಾದ್ ನಿಂದ ಬೆಂಗಳೂರಿಗೆ ವಿಮಾನದ ಮೂಲಕ ಬಂದ ಬಾಲಕೃಷ್ಣ ಅವರು, ನಂತರ ರಸ್ತೆ ಮಾರ್ಗವಾಗಿ ಕಂಠೀರವ ಕ್ರೀಡಾಂಗಣಕ್ಕೆ ಆಗಮಿಸಿದರು. ಪುನೀತ್ ರ ಅಂತಿಮ ದರ್ಶನ ಪಡೆದು, ನಟ ಶಿವರಾಜ್ ಕುಮಾರ್ ಅವರಿಗೆ ಸಾಂತ್ವಾನ ಹೇಳಿದ್ದಾರೆ. ಇದೇ ವೇಳೆ ನೃತ್ಯ ನಿರ್ದೇಶಕ ಪ್ರಭುದೇವ ಕೂಡ ನಟ ಪುನೀತ್’ರ ಅಂತಿಮ ದರ್ಶನ ಪಡೆದರು.