ಬೆಂಗಳೂರು: ರಾಜ್ಯದ ಜನತೆಗೆ ಹಬ್ಬದ ಸಂಭ್ರಮದ ನಡುವೆ ಕೊರೊನಾದಿಂದ ಸ್ವಲ್ಪ ಮಟ್ಟಿಗೆ ಬಿಡುವು ಸಿಕ್ಕಂತೆ ಕಾಣಿಸುತ್ತಿದೆ. ಶುಕ್ರವಾರ ಹೊಸ ಪ್ರಕರಣಗಳ ಸಂಖ್ಯೆ 400ಕ್ಕಿಂತ ಕೆಳಕ್ಕಿಳಿದಿದ್ದು ಜನರು ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಟ್ಟಿದ್ದಾರೆ.
24 ಗಂಟೆಗಳ ಅಂತರದಲ್ಲಿ 397 ಪ್ರಕರಣಗಳು ದೃಢಪಟ್ಟಿದ್ದು ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಒಟ್ಟು ಸಂಖ್ಯೆ 29,80,170ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಚಿಕಿತ್ಸೆ ಫಲಿಸದೇ 5 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಇಲ್ಲಿಯವರೆಗೆ ಕರ್ನಾಟಕದಲ್ಲಿ ಕೋವಿಡ್ – 19ನಿಂದ ಸಾವನ್ನಪ್ಪಿದವರ ಸಂಖ್ಯೆ 37,866ಕ್ಕೆ ತಲುಪಿದೆ.
ರಾಜಧಾನಿ ಬೆಂಗಳೂರಿನಲ್ಲಿ 3 ಮಂದಿ ಅಸುನೀಗಿದ್ದರೆ, ತುಮಕೂರು ಹಾಗೂ ಉತ್ತರ ಕನ್ನಡದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಉಳಿದ ಜಿಲ್ಲೆಗಳು ಶೂನ್ಯ ಸಾಧನೆ ಮಾಡಿವೆ.