ಬೆಂಗಳೂರು : ರಾಜ್ಯದಲ್ಲಿ ಉಪಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಡೇಟ್ ಫಿಕ್ಸ್ ಆಗಿದೆ.
ಅಕ್ಟೋಬರ್ 30ರಂದು ಸಿಂದಗಿ ಹಾಗೂ ಹಾನಗಲ್ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ. ಅಕ್ಟೋಬರ್ 1ರಂದು ಉಪಚುನಾವಣೆಯ ಅಧಿಸೂಚನೆ ಹೊರಬೀಳಲಿದ್ದು, ಅಕ್ಟೋಬರ್ 8 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅ. 11ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅ.13 ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದೆ.
ಬಿಜೆಪಿ ಶಾಸಕ ಸಿ.ಎಂ. ಉದಾಸಿ ಅವರ ನಿಧನದಿಂದ ಹಾವೇರಿಯ ಹಾನಗಲ್ ಕ್ಷೇತ್ರದಲ್ಲಿ ಚುನಾವಣೆ ನಡೆಯುತ್ತಿದ್ದು, ವಿಜಯನಗರದ ಸಿಂದಗಿಯಲ್ಲಿ ಜೆಡಿಎಸ್ ಶಾಸಕ ಎಂ.ಸಿ. ಮನಗೂಲಿ ನಿಧನದಿಂದ ಈ ಕ್ಷೇತ್ರ ತೆರವಾಗಿತ್ತು.