News Karnataka Kannada
Tuesday, May 07 2024
ಬೆಂಗಳೂರು

ಹೆಚ್ಡಿಕೆ ವಿರುದ್ಧ ಸಿದ್ದು ಗರಂ

Siddaramaiah Bang 17 6 21 No 176218 Newsk 3471785224
Photo Credit :

ಬೆಂಗಳೂರು : ನಾನು ಮುಖ್ಯಮಂತ್ರಿ ಆಗಿದ್ದಾಗ ಜಾತಿ‌ ಸಮೀಕ್ಷೆ ಪೂರ್ಣ ಆಗಿರಲಿಲ್ಲ. ಎಚ್.​ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಜಾತಿ‌ ಸಮೀಕ್ಷೆ ಪೂರ್ಣವಾಯ್ತು. ಆದ್ರೆ, ಅದನ್ನು ಕುಮಾರಸ್ವಾಮಿ ಬಿಡುಗಡೆ ಮಾಡಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಆಗ ಪುಟ್ಟರಂಗಶೆಟ್ಟಿ ಹಿಂದುಳಿದ ವರ್ಗಗಳ ಸಚಿವನಾಗಿದ್ದರು. ವರದಿ ಪೂರ್ಣವಾಗಿದೆ ಎಂದು ನನಗೆ ಮಾಹಿತಿ ನೀಡಿದ್ರು. ಜಾತಿ ಗಣತಿ ಬಿಡುಗಡೆಗೆ ಪುಟ್ಟರಂಗಶೆಟ್ಟಿ ಪ್ರಯತ್ನ ಮಾಡಲು ಹೋಗಿದ್ದರು. ಆದರೆ ಆಗ ಕುಮಾರಸ್ವಾಮಿ ಬಿಡುಗಡೆ ಮಾಡಲಿಲ್ಲ. ಪುಟ್ಟರಂಗಶೆಟ್ಟಿಯನ್ನು ಕುಮಾರಸ್ವಾಮಿ ಹೆದರಿಸಿ ಬಿಟ್ಟಿದ್ದರು. ಅವರಿಗೆ ಹೆದರಿ ವರದಿ ಬಿಡುಗಡೆ ಗೋಜಿಗೆ ಹೋಗಲಿಲ್ಲ. ಇದನ್ನು ನಾನು ಹೇಳಿದರೆ ಕುಮಾರಸ್ವಾಮಿಗೆ ಕೋಪ ಬರುತ್ತೆ. ಸಿದ್ದರಾಮಯ್ಯ ಕೂತ್ಕೊಂಡು ಬರೆಸಿಬಿಟ್ಟಿದ್ದಾನೆ ಎನ್ನುತ್ತಾರೆ ಎಂದು ಟಾಂಗ್ ಕೊಟ್ಟರು.

ಹಿಂದುಳಿದವರು ಜಾತಿ ಹೆಸರಲ್ಲಿ ಸಮ್ಮೇಳನ ಮಾಡಿದರೆ ತಪ್ಪಲ್ಲ. ಮುಂದುವರಿದವರು ಜಾತಿ ಸಮ್ಮೇಳನಗಳನ್ನು ಮಾಡಬಾರದು. ಹಿಂದುಳಿದವರೇ ಸಂಘಟಿತರಾಗಿ ಸಮ್ಮೇಳನ ಮಾಡಬೇಕು ಎಂದರು.

ಕೆಲವರು ಹೆಸರಿಗೆ ಮಾತ್ರ ಬಸವಣ್ಣನ ಹೆಸರು ಹೇಳುತ್ತಾರೆ. ಇವನಾರವ ಇವನಾರವ, ನಮ್ಮವ‌ ನಮ್ಮವ ವಚನ ಹೇಳ್ತಾರೆ. ಪಕ್ಕದಲ್ಲಿ ನಿಂತು ನೀವು ಯಾವ ಜಾತಿ ಎಂದು ಕೇಳುತ್ತಾರೆ. ನಮ್ಮ ಸಂವಿಧಾನ ಅತ್ಯಂತ ಒಳ್ಳೆಯದು. ಆದರೆ ಸಂವಿಧಾನ ಒಳ್ಳೆಯವರ ಕೈಯಲ್ಲಿರಬೇಕು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು