News Karnataka Kannada
Sunday, April 28 2024
ಬೆಂಗಳೂರು

ಹೆಚ್ ಡಿ ಕುಮಾರಸ್ವಾಮಿ ಮಾತಿಗೆ ನಾನ್ ಸೆನ್ಸ್ ಎಂದ ನಟ ಚೇತನ್

Hd Kumara Swamy 15 7 21
Photo Credit :
ಬೆಂಗಳೂರು : ಕರ್ನಾಟಕದಲ್ಲಿ ಆಡಳಿತದ ಅವಕಾಶ ಸಿಕ್ಕರೆ ಸಾಕಷ್ಟು ಬದಲಾವಣೆಯನ್ನು ತರಬಹುದು ಎಂಬ ಕುಮಾರಸ್ವಾಮಿ ಮಾತಿಗೆ ನಟ ಚೇತನ್ ಅರ್ಥ ವಿಲ್ಲದ ಮಾತು ನಾನ್ ಸೆನ್ಸ್ ಎಂದು ಟೀಕಿಸಿದ್ದಾರೆ .
ಈ  ಕುರಿ  ಟ್ವೀಟ್ ಮಾಡಿರುವ ಚೇತನ್, ಕರ್ನಾಟಕವನ್ನು 5 ವರ್ಷಗಳ ಮುನ್ನಡೆಸುವ ಸ್ವಾತಂತ್ರ್ಯವಿದ್ದಿದ್ದರೆ ಕ್ರಾಂತಿಕಾರಿ ಬದಲಾವಣೆಗಳನ್ನು ತರುತ್ತೇನೆಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮೊದಲಿಗೆ, 2 ಬಾರಿ ಅವರು ಸಿಎಂ ಆಗಿದ್ದಾಗಲೂ ಕೂಡಾ ನಮ್ಮ ರಾಜ್ಯಕ್ಕೆ ಅಂತಹದೇನೂ ಕ್ರಾಂತಿಕಾರಿ ಮಾಡಲಿಲ್ಲ, ಪ್ರಯತ್ನವನ್ನು ಮಾಡಲಿಲ್ಲ. ಮುಖ್ಯವಾಗಿ ಅವರಿಗೆ ಕ್ರಾಂತಿಕಾರಿ ದೃಷ್ಟಿ ಇಲ್ಲ ಮತ್ತು ಯಥಾಸ್ಥಿತಿ ಚಿಂತನೆ ಪ್ರಕ್ರಿಯೆಯು ಅಧಿಕಾರಕ್ಕೆ ಮುಂಚಿತವಾಗಿರಬೇಕು ಇವುಗಳೆಲ್ಲಾ ನಾನ್ ಸೆನ್ಸ್ ಪದಗಳು ಎಂದು ಚೇತನ್ ಹೇಳಿದ್ದಾರೆ.

ಚೇತನ್ ಅವರ ಅಭಿಪ್ರಾಯಕ್ಕೆ ಪ್ರತಿಕ್ರಿಯಿಸಿರುವ ಜೆಡಿಎಸ್ ಮಾಹಿತಿ ತಂತ್ರಜ್ಞಾನ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಪ್ರತಾಪ್ ಕಣಗಾಲ್,  ತಾವೊಬ್ಬ ಹೋರಾಟಗಾರ ಎಂದು ಬಿಂಬಿಸಿಕೊಳ್ಳುವ ಚೇತನ್, ರಾಷ್ಟ್ರವಾದಿ ನಟಿಯರಂತೆ ಕೇವಲ ಗಮನ ಸೆಳೆಯುವ ಪ್ರಯತ್ನ ಮಾಡಿ ವಿಫಲ ನಟನಾಗಿ ಉಳಿದಿದ್ದಾರೆ. ಯಾವ ವಿಷಯವನ್ನು ಅರಿಯದೆ ಎಲ್ಲದರಲ್ಲೂ ಮೂಗು ತೂರಿಸುತ್ತಾರೆ ಎಂದು ಟೀಕಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು