ಬೆಂಗಳೂರು: ಕ್ರಿಸ್ಮಸ್ ಹಬ್ಬದ ಸಂದರ್ಭದ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಬರೋಬ್ಬರಿ 1000 ವಿಶೇಷ ಬಸ್ಗಳ ವ್ಯವಸ್ಥೆ ಮಾಡಿದೆ. ಡಿ. 22 ರಿಂದ ಡಿ. 24ರವರೆಗೆ ಈ ವಿಶೇಷ ಬಸ್ ಗಳು ಸಂಚರಿಸಲಿದ್ದು, ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಲು ವ್ಯವಸ್ಥೆ ಕಲ್ಪಿಸಿದೆ.
ಹೊರ ರಾಜ್ಯಗಳಾದ ತಮಿಳುನಾಡು, ಕೇರಳದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್ ಗಳು ಸಂಚರಿಸಲಿದ್ದು, ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ,ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ ಸೇರಿದಂತೆ ಹಲವು ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ಗಳಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. www.ksrtc.in ವೆಬ್ಸೈಟ್ಗೆ ಮೂಲಕ ಆನ್ಲೈನ್ ಟಿಕೆಟ್ ಬುಕ್ ಮಾಡಬಹುದಾಗಿದೆ.