ಬೆಂಗಳೂರು: 2ನೇ ಪೋಕ್ಸೋ ಕೇಸ್ನಲ್ಲಿ ಬಂಧನವಾಗಿರುವ ಮುರುಘಾ ಮಠದ ಶಿವಮೂರ್ತಿ ಶರಣರು ಮತ್ತೆ ಜೈಲು ಪಾಲಾಗಿದ್ದಾರೆ. ಮುರುಘಾ ಶ್ರೀಗಳನ್ನು ಇಂದು ಮಧ್ಯಾಹ್ನ ಬಂಧಿಸಿದ್ದ ದಾವಣಗೆರೆ ಪೊಲೀಸರು 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧಕ್ಕೆ ಆದೇಶಿಸಿದೆ.
14 ತಿಂಗಳ ಜೈಲುವಾಸ ಅನುಭವಿಸಿದ್ದ ಮುರುಘಾ ಸ್ವಾಮೀಜಿ 4 ದಿನಗಳ ಹಿಂದಷ್ಟೇ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇಂದು 2ನೇ ಪೋಕ್ಸೋ ಕೇಸ್ನಲ್ಲಿ ಜಿಲ್ಲಾ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.