News Karnataka Kannada
Sunday, April 28 2024
ಬೆಂಗಳೂರು

 150 ತಾಲೂಕು ಹಾಗೂ 14 ಜಿಲ್ಲಾಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತಾ ಕ್ರಮ: ಡಾ. ಕೆ ಸುಧಾಕರ್

Untitled 1
Photo Credit :

ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ, ವೈದ್ಯಕೀಯ ಕಾಲೇಜುಗಳಲ್ಲಿಅಗ್ನಿ ಅವಘಢದಂತಹ ಘಟನೆಗಳನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸಂಬಂಧ ಪಟ್ಟ ಇಲಾಖೆಗಳಿಗೆ ಸೂಚನೆ ನೀಡಿದ್ದಾರೆ.

ಕೆಲ ದಿನಗಳ ಹಿಂದೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜೊತೆ ನಡೆದ ವಿಡಿಯೋ ಸಂವಾದದ ವೇಳೆ, ಪ್ರಧಾನಿಗಳು ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷಾ ಕ್ರಮಗಳನ್ನು ಅನುಸರಿಸುವ ಬಗ್ಗೆ ಸಲಹೆ, ಸೂಚನೆಗಳನ್ನು ನೀಡಿದ್ದರು.

ಪ್ರಧಾನಿಗಳ ಸೂಚನೆ ಮೇರೆಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ರಾಜ್ಯದ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಫೈರ್ ಸೇಪ್ಟಿ ಆಡಿಟ್ ಗೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಲಿಖಿತ ಸೂಚನೆ ನೀಡಿದ್ದರು.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ, 166 ಆಸ್ಪತ್ರೆಗಳಿಗೆ ಅಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ತಲಾ 50,000 ರೂಪಾಯಿಗಳನ್ನು ನೀಡಲಾಗುತ್ತಿದೆ.

ಅಗ್ನಿ ಸುರಕ್ಷತಾ ಕ್ರಮಗಳ ಅಳವಡಿಕೆ ನಂತರ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಮೂಲಕ ಎಲ್ಲಾ ಆಸ್ಪತ್ರೆಗಳು ನಿರಪೇಕ್ಷಣಾ ಪತ್ರ ಪಡೆಯಬೇಕಿದೆ. ಮೇ 21ರ ತನಕ ಕಾಲಮಿತಿಯನ್ನು ಕೂಡ ನೀಡಲಾಗಿದೆ. 16 ಜಿಲ್ಲಾ ಆಸ್ಪತ್ರೆಗಳು, 150 ತಾಲೂಕು ಆಸ್ಪತ್ರೆಗಳಿಗೆ ಈಗಾಗಲೇಈ ಬಗ್ಗೆ ಸೂಚನೆಯನ್ನು ಕೂಡ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು