ಬೆಂಗಳೂರು : ಮೆಟ್ರೋ ಎರಡನೇ ಹಂತವನ್ನು 2024ಕ್ಕೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನಲ್ಲಿ ಮೈಸೂರು ರಸ್ತೆಯಿಂದ ಕೆಂಗೇರಿ ವರೆಗೂ ವಿಸ್ತರಣೆಗೊಂಡ 7.5 ಕಿ.ಮೀ. ದೂರದ ಸಂಚಾರವನ್ನು ಉದ್ಭಾಟಿಸಿದ ನಂತರ ಮಾತನಾಡಿದ ಅವರು, ಬೆಂಗಳೂರಿನ ಸಮಗ್ರ ಅಭಿವೃದ್ಧಿಯಲ್ಲಿ ಮೆಟ್ರೋ ಮಾರ್ಗವನ್ನು ರಾಮನಗರ, ಮಾಗಡಿ ರಸ್ತೆ ಮತ್ತು ರಾಜನಕುಂಟೆವರೆಗೂ ವಿಸ್ತರಣೆ ಮಾಡಲು ಯೋಜನೆ ರೂಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಎರಡನೇ ಹಂತ ಪೂರ್ಣಗೊಂಡ ನಂತರ ರ 3ನೇ ಹಂತವನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.
ಮೆಟ್ರೋ ಯೋಜನೆ ಬೆಂಗಳೂರಿಗೆ ಬಹು ಮುಖ್ಯ. ಮೆಟ್ರೋ ಇರುವುದರಿಂದ ಐಟಿ ಜನರು ಇಲ್ಲಿಗೆ ಬರುತ್ತಿದ್ದಾರೆ. ಮೂರು ಕಮ್ಯುನಿಕೇಷನ್ ಮಾರ್ಗ ಮಾಡ್ತಿದ್ದೇವೆ. ವಿಮಾನ ನಿಲ್ದಾಣಕ್ಕೆ ಮಾರ್ಗ ಮಾಡ್ತಿದ್ದೇವೆ. ಎಲ್ಲೂ ಕೂಡ ಈ ಯೋಜನೆ ಇಲ್ಲ. ಅದನ್ನ ನಾವು ಮಾಡ್ತಿದ್ದೇವೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರು ಕೂಡ ಮೆಟ್ರೋ ಬಗ್ಗೆ ಯಾವುದೇ ಯೋಜನೆ ಮಾಡಿದರು ಹಣಕಾಸಿನ ನೆರವು ನೀಡುವುದಾಗಿ ಹೇಳಿದ್ದಾರೆ. ಇವರು ಸಬ್ ಅರ್ಬನ್ ರೈಲಿಗೆ ಅನುಮತಿ ನೀಡಿದ್ದಾರೆ ಎಂದರು.