ಬೆಂಗಳೂರು: ಸೂಕ್ತ ದಾಖಲೆಗಳಿಲ್ಲದೇ ಬೈಕ್ನಲ್ಲಿ ಸಾಗಿಸುತ್ತಿದ್ದ 25 ಲಕ್ಷ ರೂ. ಹಣವನ್ನು ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಹೊಸೂರು ಸಮೀಪದ ಕರ್ನೂರು ಚೆಕ್ಪೋಸ್ಟ್ ಬಳಿ ವಶಕ್ಕೆ ಪಡೆದಿದ್ದಾರೆ.
ಹೊಸೂರಿನಿಂದ ಕರ್ನೂರು ಮಾರ್ಗವಾಗಿ ರಾಜೇಂದ್ರನ್ ಎಂಬವರು ಬೈಕ್ನಲ್ಲಿ ಹಣ ತರುತ್ತಿದ್ದರು. ಈ ವೇಳೆ ಅಧಿಕಾರಿಗಳು ಬೈಕ್ ತಡೆದು ಬ್ಯಾಗ್ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಸೂಕ್ತ ದಾಖಲೆಗಳಿಲ್ಲದೇ ಇರುವ 25 ಲಕ್ಷ ರೂ. ಹಣ ಪತ್ತೆಯಾಗಿದ್ದು, ಅಧಿಕಾರಿಗಳು ಹಣವನ್ನು ವಶಕ್ಕೆ ಪಡೆದಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆಯದಂತೆ, ಚುನಾವಣೆ ಘೋಷಣೆಯಾದ ಬಳಿಕ ಅಧಿಕಾರಿಗಳು ವಾಹನ ತಪಾಸಣೆ ಹಾಗೂ ಇನ್ನಿತರೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.