ಬೆಂಗಳೂರು: ನಗರದ ಮೊಬೈಲ್ ಶಾಪ್ ಒಂದರಲ್ಲಿ ಹನುಮಾನ್ ಚಾಲೀಸಾ ಹಾಡು ಹಾಕಿದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಸಿರುವ ಘಟನೆ ನಗರತ್ಪೇಟೆಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧ ಪಟ್ಟ ಐವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ನಗರದಲ್ಲಿ ಯುವಕ ತನ್ನ ಮೊಬೈಲ್ ಶಾಪ್ನಲ್ಲಿ ಹನುಮಾನ್ ಚಾಲೀಸಾ ಹಾಡನ್ನು ಜೊರಾಗಿ ಸೌಂಡ್ ಇಟ್ಟಿದ್ದ ಈ ವೇಳೆ 6 ಮಂದಿ ಇದ್ದಕಿದ್ದಂತೆ ಶಾಪ್ ನುಗ್ಗಿ ಮಸೀದಿಯಲ್ಲಿ ಪ್ರಾರ್ಥನೆ ಸಮಯದಲ್ಲಿ ಜೊರಾಗಿ ಸೌಂಡ್ ಇಡಬೇಡ ಎಂದು ಯುವಕನ ಮುಖೇಶ್ ಮೇಲೆ ಕೊರಳ ಪಟ್ಟಿ ಹಿಡಿದು ಹಲ್ಲೆ ನೆಡಸಿದ್ದರು. ಗ್ಯಾಂಗ್ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಗಾಯಗೊಂಡ ಮುಖೇಶ್ ಪೊಲೀಸ್ ಠಾಣೆ ಗೆ ದೂರು ಸಲ್ಲಿಸಿದ್ದ.
ಇದೀಗ ಈ ಪ್ರಕರಣದಲ್ಲಿ ಪೊಲೀಸರು ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಹಲ್ಲೆ ಮಾಡಿದ್ದ ಸುಲೇಮಾನ್, ತರುಣ್, ಶನವಾಜ್, ರೋಹಿತ್, ಡ್ಯಾನಿಶ್ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 506, 504, 149, 307, 323 ಹಾಗೂ 324ರ ಅಡಿಯಲ್ಲಿ ಐವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.