ಬೆಂಗಳೂರು: ಸಾಮಾನ್ಯವಾಗಿ ಬಸ್ ಕಂಡಕ್ಟರ್ ಹಾಗೂ ಪ್ರಯಾಣಿಕರ ನಡುವೆ ಚಿಲ್ಲರೆ ಹಣದ ವಿಷಯವಾಗಿ ಆಗಾಗ್ಗೆ ಜಗಳಗಳು ನಡೆಯುತ್ತಿರುತ್ತವೆ. ಕೆಲವೊಮ್ಮೆ ಕಂಡಕ್ಟರ್ 1 ರೂಪಾಯಿ ಚಿಲ್ಲರೆ ಹಣವನ್ನು ಮತ್ತೆ ಕೊಡುತ್ತೇನೆ ಎಂದು ಪ್ರಯಾಣಿಕರಿಗೆ ವಾಪಸ್ ಹಿಂದಿರುಗಿಸೋದೇ ಇಲ್ಲ. ಇದೀಗ ಅದೇ ರೀತಿಯ ಘಟನೆಯೊಂದು ಬೆಂಗಳೂರಿನ ಬಿ.ಎಂ.ಟಿ.ಸಿ ಬಸ್ ಒಂದರಲ್ಲಿ ನಡೆದಿದ್ದು, ಕಂಡಕ್ಟರ್ 5 ರೂಪಾಯಿ ಚಿಲ್ಲರೆ ಹಣ ವಾಪಸ್ ಕೊಟ್ಟಿಲ್ಲ ಎಂದು ಆ ಪ್ರಯಾಣಿಕ ತನ್ನ ಅಸಮಾಧಾನವನ್ನು ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಪಡಿಸಿದ್ದಾನೆ. ಈ ಕುರಿತ ಪೋಸ್ಟ್ ಒಂದು ಸಖತ್ ವೈರಲ್ ಆಗುತ್ತಿದೆ.
ಈ ಪೋಸ್ಟ್ನ್ನು ನಿತೀನ್ ಕೃಷ್ಣ (N_4_NITHIN) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಕಂಡಕ್ಟರ್ ಬಳಿ 1 ರೂಪಾಯಿ ಚೇಂಜ್ ಕೂಡಾ ಇಲ್ಲವೇ? ನಾನು ನನ್ನ 5 ರೂಪಾಯಿ ಹಣವನ್ನು ಕಳೆದುಕೊಂಡೆ, ಇದಕ್ಕೆ ಏನಾದರೂ ಪರಿಹಾರ ಇದೆಯೇ?” ಎಂದು ಬಿ.ಎಂ.ಟಿ.ಸಿಯ ಅಧೀಕೃತ ಎಕ್ಸ್ ಖಾತೆಯಲ್ಲಿ ಟ್ಯಾಗ್ ಮಾಡಿ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.
ನಿತೀನ್ ಅವರು ಬಿ.ಎಂ.ಟಿ.ಸಿ ಬಸ್ಸಿನಲ್ಲಿ ರಾಗಿಗುಡ್ಡ ದೇವಸ್ಥಾನದಿಂದ ಹೆಚ್.ಎಸ್.ಆರ್ ಡಿಪೋದ ಕಡೆ ಹೋಗುತ್ತಾರೆ. ಟಿಕೆಟ್ ಬೆಲೆ ರೂಪಾಯಿ 15 ಆಗಿದ್ದರಿಂದ ನಿತೀನ್ 20 ರೂಪಾಯಿ ನೋಟನ್ನು ಕಂಡಕ್ಟರ್ ಗೆ ನೀಡುತ್ತಾರೆ. ಆದರೆ ಆ ಕಂಡಕ್ಟರ್ ವಾಪಸ್ 5 ರೂಪಾಯಿ ಚಿಲ್ಲರೆ ಹಣವನ್ನು ನೀಡಲೇ ಇಲ್ಲ. ಹೀಗೆ ಕಂಡಕ್ಟರ್ ಚಿಲ್ಲರೆ ಹಣವನ್ನು ವಾಪಸ್ ನೀಡಿಲ್ಲ ಎಂಬ ವಿಚಾರವನ್ನು ನಿತೀನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…
ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…
ಅನಾಥ ಬುದ್ಧಿಮಾಂದ್ಯ ಹುಡುಗನನ್ನು ರಕ್ಷಣೆ ಮಾಡಿ ಶಕ್ತಿ ಅನಾಥಾಶ್ರಮಕ್ಕೆ ಸೇರಿಸಿರುವ ಘಟನೆಯೊಂದು ಮಡಿಕೇರಿಯಲ್ಲಿ ನಡೆದಿದೆ.
ಗ್ರಾಹಕರ ಸೋಗಿನಲ್ಲಿ ಬಂದು ಬಂಗಾರದ ಖಡ್ಗ ಕದ್ದು ಪರಾರಿಯಾದ ಘಟನೆ ಕಲಬುರಗಿ ನಗರದ ಅನ್ನಪೂರ್ಣ ಕ್ರಾಸ್ನಲ್ಲಿರುವ ತನಿಷ್ಕ ಜ್ಯುವೆಲ್ಲರಿ ಶಾಪ್ನಲ್ಲಿ…
ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.…