News Karnataka Kannada
Monday, April 29 2024
ಬೆಂಗಳೂರು

52 ಸಾವಿರ ಕೋಟಿ ಹೂಡಿಕೆಗೆ ಒಪ್ಪಂದ: ಸಿಎಂ ಬೊಮ್ಮಾಯಿ

Untitled 1
Photo Credit :

ಬೆಂಗಳೂರು: ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಎರಡು ದೊಡ್ಡ ಕಂಪನಿಗಳು ಕರ್ನಾಟಕದಲ್ಲಿ ₹52 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲು ಒಪ್ಪಂದ ಮಾಡಿಕೊಂಡಿವೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೃಹತ್ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಸಮ್ಮುಖದಲ್ಲಿ ಎರಡೂ ಕಂಪನಿಗಳ ಪ್ರತಿನಿಧಿಗಳು ಹಾಗೂ ಸರ್ಕಾರದ ಅಧಿಕಾರಿಗಳು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಇಂಧನ ವಲಯದಲ್ಲಿ ₹50 ಸಾವಿರ ಕೋಟಿ ಹೂಡಿಕೆ ಮಾಡುವುದಾಗಿ ರೆನ್ಯೂ ಪವರ್ ಕಂಪನಿ ಹಾಗೂ ₹2 ಸಾವಿರ ಕೋಟಿ ಹೂಡಿಕೆ ಮಾಡುವುದಾಗಿ ಲುಲು ಗ್ರೂಪ್ ಇಂಟರ್ ನ್ಯಾಷನಲ್ ಸಂಸ್ಥೆ ಒಪ್ಪಂದ ಮಾಡಿಕೊಂಡಿವೆ.

‘ಈ ಎರಡೂ ಒಪ್ಪಂದಗಳಿಂದ ಇಂಧನ ವಲಯದ ಅಭಿವೃದ್ಧಿಯಲ್ಲಿ ಮಹಾ ಮೈಲುಗಲ್ಲನ್ನು ತಲುಪಲು ಸಾಧ್ಯ ಹಾಗೂ ಸುಮಾರು 30 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯ ಅವಕಾಶ ತೆರೆದುಕೊಳ್ಳಲಿದೆ. ದಾವೋಸ್ ಭೇಟಿ ಅತ್ಯಂತ ಫಲಪ್ರದವಾಗಿದೆ’ ಎಂದು ಬೊಮ್ಮಾಯಿ ಪ್ರತಿಪಾದಿಸಿದರು.

ಇಂಇಂಗ್ಕಾ ಗ್ರೂಪ್ (ಐಕಿಯ) ಸಿಇಓ. ಜೆಸ್ಪರ್ ಬ್ರಾಡಿನ್ ಅವರು ರಾಜ್ಯದಲ್ಲಿ ಇನ್ನಷ್ಟು ಐಕಿಯ ಸ್ಟೋರ್ ತೆರೆಯುವ ಬಗ್ಗೆ ಆಸಕ್ತಿ ತೋರಿದ್ದಾರೆ. ಇದಲ್ಲದೇ, ನೋಕಿಯಾ, ಹೀರೊ ಮೋಟೋ ಕಾರ್ಪ್, ಎ ಬಿ ಇನ್ ಬೇವ್ ಸಂಸ್ಥೆ, ಆರ್ಸೆಲರ್ ಮಿತ್ತಲ್, ಅದಾನಿ ಗ್ರೂಪ್, ಜಾನ್ಸನ್ ಕಂಟ್ರೋಲ್ಸ್, ಹನಿವೆಲ್ ಕಂಪನಿ, ಐಬಿಎಂ, ಬೈಜೂಸ್, ಮೀಷೊ ಸಂಸ್ಥೆಗಳೊಂದಿಗೆ ಮುಖ್ಯಮಂತ್ರಿ ಹಾಗೂ ಅಧಿಕಾರಿಗಳು ಸಮಾಲೋಚನೆ ನಡೆಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು