ಬೆಂಗಳೂರು: ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನ ದೇಶಾದ್ಯಂತ ನಡೆಯುತ್ತಿದೆ. ಕರ್ನಾಟಕದಲ್ಲಿನ 2 ಹಂತದ ಮತದಾನ ಪೈಕಿ ಇಂದು ಮೊದಲ ಹಂತದ ಮತದಾನ. ಮತದಾರರು ಬೆಳಗ್ಗೆಯಿಂದ ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಚುನಾವಣಾ ಆಯೋಗ ನೀಡಿರುವ ಇದುವರೆಗಿನ(ಮಧಾಹ್ಯ 3 ಗಂಟೆವರೆಗೆ) ಅಂಕಿ ಅಂಶದ ಪ್ರಕಾರ, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿರುವ 14 ಕ್ಷೇತ್ರಗಳ ಪೈಕಿ ದಕ್ಷಿಣ ಕನ್ನಡದಲ್ಲಿ ಗರಿಷ್ಠ ಮತದಾನವಾಗಿದೆ. ಇನ್ನು ಬೆಂಗಳೂರು ಸೆಂಟ್ರಲ್ನಲ್ಲಿ ಕನಿಷ್ಠ ಮತದಾನ ದಾಖಲಾಗಿದೆ.
ದಕ್ಷಿಣ ಕನ್ನಡದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನ 3 ಗಂಟೆ ವರೆಗೆ ಶೇಕಡ 58.76ರಷ್ಟು ಮತದಾನವಾಗಿದೆ. (ಬೆಳ್ತಂಗಡಿ 61.41, ಮೂಡಬಿದ್ರಿ 54.95,
ಮಂಗಳೂರು 58.72, ಬಂಟ್ವಾಳ 61.17, ಪುತ್ತೂರು 62, ಸುಳ್ಯ 64.46) ಇನ್ನು ಕನಿಷ್ಠ ಮತದಾನ ದಾಖಲಾಗಿರುವ ಬೆಂಗಳೂರು ಸೆಂಟ್ರಲ್ನಲ್ಲಿ ಶೇಕಡಾ 40.10 ರಷ್ಟು ಮತದಾನವಾಗಿದೆ. ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣದಲ್ಲೂ ನಿರೀಕ್ಷಿತ ಪ್ರಮಾಣದಲ್ಲಿ ಮತದಾನ ದಾಖಲಾಗಿಲ್ಲ. ಈ ಪೈಕಿ ಬೆಂಗಳೂರು ಗ್ರಾಮಾಂತರದಲ್ಲಿ ಶೇಕಡಾ 49.62ರಷ್ಟು ಮತದಾನ ದಾಖಲಾಗಿದೆ.
ಉಡುಪಿ ಚಿಕ್ಕಮಗಳೂ ಕ್ಷೇತ್ರದಲ್ಲಿ 57.49ರಷ್ಟು ಮತದಾನವಾಗಿದೆ. ಇನ್ನು ಹಾಸನದಲ್ಲಿ ಶೇಕಡಾ 55.92, ಚಿತ್ರದುರ್ಗದಲ್ಲಿ ಶೇಕಡಾ 52.14 ರಷ್ಟು ಮತದಾನವಾಗಿದೆ. ಇನ್ನು ತುಮಕೂರಿನಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನ 3ಗಂಟೆ ವರೆಗೆ ಶೇಕಡಾ 56.62ರಷ್ಟು ಮತದಾನವಾಗಿದೆ. ಮಂಡ್ಯದಲ್ಲಿ ಶೇಕಡಾ 57.44, ಮೈಸೂರಿನಲ್ಲಿ ಶೇಕಡಾ 53.55, ಚಾಮರಾಜನಗರದಲ್ಲಿ ಶೇಕಡಾ 53.55ರಷ್ಟು, ಬೆಂಗಳೂರು ಗ್ರಾಮಾಂತರದಲ್ಲಿ ಶೇಕಡಾ 49.62 ರಷ್ಟು, ಬೆಂಗಳೂರು ಉತ್ತರದಲ್ಲಿ ಶೇಕಡಾ 41.12ರಷ್ಟು, ಬೆಂಗಳೂರು ಸೆಂಟ್ರಲ್ನಲ್ಲಿ ಶೇಕಡಾ 40.10, ಬೆಂಗಳೂರು ದಕ್ಷಿಣದಲ್ಲಿ ಶೇಕಡಾ 40.77ರಷ್ಟು, ಚಿಕ್ಕಬಳ್ಳಾಪುರದಲ್ಲಿ ಶೇಕಡಾ 55.90 ಹಾಗೂ ಕೋಲಾರದಲ್ಲಿ ಶೇಕಡಾ 54.66 ರಷ್ಟು ಮತದಾನವಾಗಿದೆ.
ರಾಜ್ಯದಲ್ಲಿ ಇಂದು ನಡೆಯುತ್ತಿರುವ ಮೊದಲ ಹಂತದ ಮತಾನದಲ್ಲಿ 14 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಹೈಕೊರ್ಟ್ನ ಅಡ್ವೋಕೇಟ್ ಅನುಮಾನಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚೈತ್ರಾ ಬಿ.ಗೌಡ…
ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…
ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಘಟ್ಟದ ಕಡೆಗಳಲ್ಲಿ ರಸ್ತೆಗಳಿಗೆ ಎರಡು ಹಂಪ್ ಗಳನ್ನ ಹಾಕಿದ್ರೆ ಅಚೀವ್ ಮೆಂಟ್ ಅಂತೆ' ಘಟ್ಟದ ಮೇಲೆ ಶಾಸಕರ ಅಚೀವ್ ಮೆಂಟ್…
ನಾನು ನಿಜವನ್ನೇ ಹೇಳುತ್ತಿದ್ದೇನೆ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಅಲ್ಲ ಬದಲಾಗಿ ಅವರು ರಾಜರು ಎಂದು ರಾಹುಲ್ ಗಾಂಧಿ ಹೇಳಿದರು.
ಎಂಸಿ.ಸಿ. ಬ್ಯಾಂಕಿನ ನೂತನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಛೇರಿಯ ಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ…