ಬೆಂಗಳೂರು: 66ನೇ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ʻಕನ್ನಡಕ್ಕಾಗಿ ನಾವುʼ ವಿಶೇಷ ಅಭಿಯಾನ ಹಮ್ಮಿಕೊಂಡಿದೆ. ಈ ಅಭಿಯಾನದ ಹಿನ್ನೆಲೆಯಲ್ಲಿ ವಿಶ್ವದಾಧ್ಯಂತ ಏಕ ಕಾಲದಲ್ಲಿ ಲಕ್ಷ ಲಕ್ಷ ಕಂಠಗಳಲ್ಲಿ ಕನ್ನಡ ಗೀತ ಗಾಯನ ಕಾರ್ಯಕ್ರಮವನ್ನು ಅಕ್ಟೋಬರ್ ೨೮ ಗುರುವಾರ ಬೆಳಿಗ್ಗೆ ೧೧ ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾದ ನಾವುಗಳು ಕನ್ನಡದಲ್ಲಿ ಮಾತು , ಬರವಣಿಗೆ, ವ್ಯವಹಾರ ಮಾಡುವ ಮೂಲಕ ಕನ್ನಡ ಬೆಳೆಸಬೇಕಾಗಿದೆ. ಕನ್ನಡ ಬಾರದ ಬಂಧುಗಳಿಗೆ ಪ್ರೀತಿಯಿಂದ ಕನ್ನಡ ಕಲಿಸಬೇಕಾಗಿದೆ. ಇದರೊಂದಿಗೆ ಕನ್ನಡ ನಾಡು ನುಡಿ ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಲು ಕಟಿ ಬದ್ಧರಾಗಿರುತ್ತೇವೆ ಎನ್ನುವ ಸಂಕಲ್ಪದೊಂದಿಗೆ ಈ ಕಾರ್ಯಕ್ರಮ ನಡೆಯುತ್ತೀದೆ.
ವಿಧಾನ ಸೌಧದ ಪ್ರಧಾನ ಮೆಟ್ಟಿಲುಗಳ ಮೇಲೆ ನಡೆಯಲಿರುವ ಲಕ್ಷ ಲಕ್ಷ ಕಂಠಗಳಲ್ಲಿ ಕನ್ನಡ ಗೀತ ಗಾಯನ ಕಾರ್ಯಕ್ರಮದಲ್ಲಿ ವಿಧಾನ ಸೌಧದ ಎಲ್ಲ ಸಿಬ್ಬಂಧಿಗಳ ಜೊತೆ ವಿಧಾನ ಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ,ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶ್ರೀ ವಿ ಸುನಿಲ್ ಕುಮಾರ್ ಅವರು ಭಾಗವಹಿಸಿ ಸಾಮೂಹಿಕ ಗೀತ ಗಾಯನ ಮಾಡಲಿದ್ದಾರೆ.