News Karnataka Kannada
Sunday, May 12 2024
ಬೆಂಗಳೂರು

 66ನೇ ಕರ್ನಾಟಕ  ರಾಜ್ಯೋತ್ಸವದ  ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ʻಕನ್ನಡಕ್ಕಾಗಿ ನಾವುʼ  ವಿಶೇಷ ಅಭಿಯಾನ

New Project (3)
Photo Credit :

ಬೆಂಗಳೂರು:  66ನೇ ಕರ್ನಾಟಕ  ರಾಜ್ಯೋತ್ಸವದ  ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ʻಕನ್ನಡಕ್ಕಾಗಿ ನಾವುʼ  ವಿಶೇಷ ಅಭಿಯಾನ ಹಮ್ಮಿಕೊಂಡಿದೆ. ಈ ಅಭಿಯಾನದ ಹಿನ್ನೆಲೆಯಲ್ಲಿ ವಿಶ್ವದಾಧ್ಯಂತ ಏಕ ಕಾಲದಲ್ಲಿ ಲಕ್ಷ ಲಕ್ಷ ಕಂಠಗಳಲ್ಲಿ  ಕನ್ನಡ ಗೀತ ಗಾಯನ ಕಾರ್ಯಕ್ರಮವನ್ನು  ಅಕ್ಟೋಬರ್ ೨೮  ಗುರುವಾರ ಬೆಳಿಗ್ಗೆ ೧೧ ಗಂಟೆಗೆ ಹಮ್ಮಿಕೊಳ್ಳಲಾಗಿದೆ.


ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾದ ನಾವುಗಳು ಕನ್ನಡದಲ್ಲಿ ಮಾತು , ಬರವಣಿಗೆ, ವ್ಯವಹಾರ ಮಾಡುವ ಮೂಲಕ ಕನ್ನಡ ಬೆಳೆಸಬೇಕಾಗಿದೆ. ಕನ್ನಡ ಬಾರದ ಬಂಧುಗಳಿಗೆ ಪ್ರೀತಿಯಿಂದ ಕನ್ನಡ ಕಲಿಸಬೇಕಾಗಿದೆ. ಇದರೊಂದಿಗೆ ಕನ್ನಡ ನಾಡು ನುಡಿ ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಲು ಕಟಿ ಬದ್ಧರಾಗಿರುತ್ತೇವೆ ಎನ್ನುವ ಸಂಕಲ್ಪದೊಂದಿಗೆ ಈ ಕಾರ್ಯಕ್ರಮ ನಡೆಯುತ್ತೀದೆ.
ವಿಧಾನ ಸೌಧದ ಪ್ರಧಾನ ಮೆಟ್ಟಿಲುಗಳ ಮೇಲೆ  ನಡೆಯಲಿರುವ ಲಕ್ಷ ಲಕ್ಷ ಕಂಠಗಳಲ್ಲಿ  ಕನ್ನಡ ಗೀತ ಗಾಯನ ಕಾರ್ಯಕ್ರಮದಲ್ಲಿ ವಿಧಾನ ಸೌಧದ ಎಲ್ಲ ಸಿಬ್ಬಂಧಿಗಳ ಜೊತೆ ವಿಧಾನ ಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ,ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶ್ರೀ ವಿ ಸುನಿಲ್ ಕುಮಾರ್  ಅವರು ಭಾಗವಹಿಸಿ  ಸಾಮೂಹಿಕ ಗೀತ ಗಾಯನ ಮಾಡಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು