ಒಂದೂವರೆ ಕೋಟಿ ರೂಪಾಯಿಗೂ ಹೆಚ್ಚು ಲಂಚ ಪಡೆದಿದ್ದ ಬಿಎಂಟಿಸಿಯ 7 ಅಧಿಕಾರಿಗಳ ಸಸ್ಪೆಂಡ್

ಬೆಂಗಳೂರು: ಗೂಗಲ್ ಪೇ, ಫೋನ್ ಪೇ ಮೂಲಕ ಸುಮಾರು ಒಂದೂವರೆ ಕೋಟಿ ರೂಪಾಯಿಗೂ ಹೆಚ್ಚು ಲಂಚ ಪಡೆದಿದ್ದ ಬಿಎಂಟಿಸಿಯ ಏಳು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ.

ಬಿಎಂಟಿಸಿಯಲ್ಲಿ ಇದೆ ಮೊದಲ ಬಾರಿಗೆ ಅಧಿಕಾರಿಗಳ ಅಕೌಂಟ್ ನಲ್ಲಿ ಇಷ್ಟು ದೊಡ್ಡ ಮೊತ್ತ ಪತ್ತೆಯಾಗಿದೆ.

ಡ್ಯೂಟಿ, ವೀಕ್ಲಿ ಆಫ್ ರಜೆ ಹಾಗೂ ಕಂಡಿಷನ್ ಇರುವ ಮತ್ತು ಹೆಚ್ಚು ಕಲೆಕ್ಷನ್ ಬರುವ ಬಸ್ ಬೇಕು ಅಂದರೆ ಡಿಪೋ ಮ್ಯಾನೇಜರ್, ಮತ್ತು ಹಿರಿಯ ಅಧಿಕಾರಿಗಳಿಗೆ ಹಣ ನೀಡಬೇಕು. ಹಣ ನೀಡಿದ್ರೆ ಎಲ್ಲಾ ವ್ಯವಸ್ಥೆ ಮಾಡುತ್ತಾರೆ ಹಣ ನೀಡಿಲ್ಲ ಅಂದರೆ ಮಾನಸಿಕವಾಗಿ ಕಿರುಕುಳ ನೀಡುವುದು ಮಾಡುತ್ತಾರೆ.

ಒಬ್ಬೊಬ್ಬ ಅಧಿಕಾರಿಗಳ ಅಕೌಂಟ್ ನಲ್ಲಿ ಸುಮಾರು 20 ರಿಂದ 25 ಲಕ್ಷ ರೂಪಾಯಿ ಸಿಕ್ಕಿದೆ. ಇದರೊಂದಿಗೆ ಒಟ್ಟು ಏಳು ಅಧಿಕಾರಿಗಳಿಂದ ಸುಮಾರು ಒಂದೂವರೆ ಕೋಟಿ ರುಪಾಯಿ ಅಕ್ರಮ ಹಣ ಪತ್ತೆಯಾಗಿದೆ.

ಕಂಡಕ್ಟರ್ ಡ್ರೈವರ್ ಗಳಿಂದ ಪ್ರತಿ ವಾರ 500 ರುಪಾಯಿ ಅಂತೆ ಪ್ರತಿ ತಿಂಗಳಿಗೆ ಎರಡು ಸಾವಿರ ರುಪಾಯಿ ವಸೂಲಿ ಮಾಡಲಾಗುತ್ತಿತ್ತು.

ಏಳು ಅಧಿಕಾರಿಗಳ ಎಲ್ಲಾ ಬ್ಯಾಂಕ್ ಡಿಟೇಲ್ಸ್ ತನಿಖೆ ನಡೆಸಿದಾಗ ಪ್ರತಿಯೊಬ್ಬರ ಅಕೌಂಟ್ ಗೆ ಡ್ರೈವರ್ ಕಂಡಕ್ಟರ್ ಗಳಿಂದ ಲಕ್ಷಾಂತರ ರೂಪಾಯಿ ಹಣವನ್ನು ಗೂಗಲ್ ಪೇ ಫೋನ್ ಪೇ ಮೂಲಕ ಹಾಕಿಸಿಕೊಂಡಿರೋದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಏಳು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ.

Ashika S

Recent Posts

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

8 seconds ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

10 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

22 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

34 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

37 mins ago

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

52 mins ago