ಬೆಂಗಳೂರು: ಕ್ಯಾಂಟರ್ ವಾಹನ ಡಿಕ್ಕಿ ಹೊಡೆದು ಬಾಲಕನೊಬ್ಬ ಪ್ರಾಣವನ್ನು ಕಳೆದುಕೊಂಡಿರುವ ಘಟನೆ ರಾಜಧಾನಿ ಬೆಂಗಳೂರಿನ ಊರ್ವಶಿ ಥಿಯೇಟರ್ ಸಮೀಪ ನಡೆದಿದೆ.
ಈ ಭೀಕರ ಅಪಘಾತದಲ್ಲಿ 4 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಅಶ್ವಿತ್ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕ್ಯಾಂಟರ್ ವಾಹನವನ್ನು ರಿವರ್ಸ್ ತೆಗೆಯುವಾಗ ಅಶ್ವಿತ್ಗೆ ಡಿಕ್ಕಿ ಹೊಡೆದಿದ್ದು, ಅಶ್ವಿತ್ ಕೆಳಗೆ ಬಿದ್ದು ಟೈಯರ್ನಡಿ ಸಿಲುಕಿದ್ದಾನೆ.
ಚಾಲಕನ ಅಜಾಗರೂಕತೆಯಿಂದ ಅಶ್ವಿತ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಲಾಸಿಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.