News Karnataka Kannada
Wednesday, May 01 2024
ಬೆಂಗಳೂರು

ಲೋಕಸಭಾ ಚುನಾವಣೆ: ʼಕೈʼ ಅಭ್ಯರ್ಥಿಗಳಿಗೆ ಗೆಲುವಿನ ಸೂತ್ರ ಬೋಧಿಸಿದ ಡಿಕೆಶಿ, ಸಿದ್ದು

ಲೋಕಸಭಾ ಚುನಾವಣೆಯಲ್ಲಿ 28ರಲ್ಲಿ 20 ಸ್ಥಾನ ಗೆಲ್ಲುವುದಕ್ಕೆ ರಾಜ್ಯ ಕಾಂಗ್ರೆಸ್‌ ಹೊಸ ರಣತಂತ್ರವನ್ನು ರೂಪಿಸಿದೆ. ಮಾರ್ಚ್‌ 22ರಂದು ಗುರುವಾರ ಸಂಜೆ 17 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್‌ ನಾಲ್ಕು ಸ್ಥಾನಗಳನ್ನು ಹೊರತುಪಡಿಸಿ 24 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದಂತಾಗಿದೆ. ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಗೆಲುವಿನ ಪಾಠಗಳನ್ನು ಹೇಳುವ ಮೂಲಕ ವ್ಯವಸ್ಥಿತ ಚುನಾವಣೆಗೆ ಸಜ್ಜಾಗುತ್ತಿದೆ.
Photo Credit : NewsKarnataka

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ 28ರಲ್ಲಿ 20 ಸ್ಥಾನ ಗೆಲ್ಲುವುದಕ್ಕೆ ರಾಜ್ಯ ಕಾಂಗ್ರೆಸ್‌ ಹೊಸ ರಣತಂತ್ರವನ್ನು ರೂಪಿಸಿದೆ. ಮಾರ್ಚ್‌ 22ರಂದು ಗುರುವಾರ ಸಂಜೆ 17 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್‌ ನಾಲ್ಕು ಸ್ಥಾನಗಳನ್ನು ಹೊರತುಪಡಿಸಿ 24 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದಂತಾಗಿದೆ.  ಕಾಂಗ್ರೆಸ್‌ ಅಭ್ಯರ್ಥಿಗಳಿಗೆ  ಗೆಲುವಿನ ಪಾಠಗಳನ್ನು ಹೇಳುವ ಮೂಲಕ ವ್ಯವಸ್ಥಿತ ಚುನಾವಣೆಗೆ ಸಜ್ಜಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ  ಲೋಕಸಭಾ ಚುನಾವಣೆ ಸಂಬಂಧದ ಸಿದ್ಧತೆಗಳನ್ನು ತೀವ್ರಗೊಳಿಸುವ ಸಂಬಂಧ ಸಚಿವರು, ಹಿರಿಯ ಶಾಸಕರು ಮತ್ತು ಸಂಭಾವ್ಯ ಅಭ್ಯರ್ಥಿಗಳ ಸಭೆ ನಡೆಸಿದರು.

ವಿಧಾನಸಭೆ ಚುನಾವಣೆಯಲ್ಲಿ ನಾವು 136 ಸ್ಥಾನ ಗೆಲ್ಲುತ್ತೀವಿ ಎಂದು ಯಾರೂ ಹೇಳಿರಲಿಲ್ಲ. ಆದರೆ ನನಗೆ ವೈಯುಕ್ತಿಕವಾಗಿ ಜನರ ಭಾವನೆ ಗೊತ್ತಿತ್ತು. ಹೀಗಾಗಿ 135 ಗೆದ್ದೇ ಗೆಲ್ತೀವಿ ಎಂದು ನಾವು ಧೈರ್ಯವಾಗಿ ಚುನಾವಣೆಗೆ ಮೊದಲೇ ಹೇಳಿದ್ದೆವು. ಲೋಕಸಭೆಯಲ್ಲೂ ನಮಗೆ 20 ಸ್ಥಾನದವರೆಗೂ ಖಚಿತವಾಗಿ ಗೆಲ್ಲುವ ಅವಕಾಶಗಳಿವೆ ಎಂದು ಖಚಿತವಾಗಿ ನುಡಿದರು. ರಾಜ್ಯದಲ್ಲಿ ಮಾತ್ರವಲ್ಲ, ದೇಶದ ನಾನಾ ಕಡೆಗಳಲ್ಲಿ ಬಿಜೆಪಿ ವಿರುದ್ಧವಾದ ಅಲೆ ತೀವ್ರವಾಗಿದೆ. ದೇಶದ ಭವಿಷ್ಯಕ್ಕೆ ಈ ಸರ್ಕಾರ ಬದಲಾಗಲೇಬೇಕಿದೆ ಎನ್ನುವ ಅಭಿಪ್ರಾಯ ವಿದ್ಯಾವಂತ ಸಮುದಾಯದಲ್ಲಿದೆ. ಹೀಗಾಗಿ ನಾವು 20 ಸ್ಥಾನ ಗೆಲ್ಲಬಹುದು. ಅಂಡರ್ ಕರೆಂಟ್ ಏನಿದೆ ಎನ್ನುವುದು ನಮಗೆ ಗೊತ್ತಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಮ್ಮ ಗ್ಯಾರಂಟಿಗಳ ಬಗ್ಗೆ ನಾಡಿನ ಜನತೆಗೆ, ನಮ್ಮ ಹೆಣ್ಣು ಮಕ್ಕಳಿಗೆ, ತಾಯಂದಿರಿಗೆ ಧನ್ಯತೆ ಇದೆ. ಇವರ್ಯಾರೂ ನಮ್ಮ ಕೈ ಬಿಡಲ್ಲ. ಪ್ರತೀ ದಿನ ಪ್ರತೀ ತಿಂಗಳು ನಾಡಿನ ಮನೆ ಮನೆಗೆ ಸರ್ಕಾರದ ಗ್ಯಾರಂಟಿಗಳ ಫಲ ಹೆಣ್ಣು ಮಕ್ಕಳ ಮಡಿಲು ಸೇರುತ್ತಿದೆ. ಈ ಧನ್ಯತೆ ನಮ್ಮ ನಾಡಿನ ತಾಯಂದಿರು ಮತ್ತು ಹೆಣ್ಣು ಮಕ್ಕಳ ಹೃದಯದಲ್ಲಿದೆ. ಇವರಿಗೆ ಕೈ ಮುಗಿದು ಮತ ಕೇಳಿ ಎಂದು ಸಂಭಾವ್ಯ ಅಭ್ಯರ್ಥಿಗಳಿಗೆ ಸಲಹೆ ನೀಡಿದರು.

ಲೋಕಸಭಾ ಚುನಾವಣೆ ಹಿನ್ನಲೆ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಸಿಎಂ, ಡಿಸಿಎಂ ಅವರು ಕೆಲವು ಕಿವಿಮಾತುಗಳನ್ನು ಹೇಳಿದ್ದು, ಲೋಕಸಭೆಯಲ್ಲಿ 20 ಸ್ಥಾನಗಳನ್ನು ಗೆಲ್ಲುತ್ತೇವೆ.. ಜನರ ನಡುವೆ ಗಟ್ಟಿಯಾಗಿ ನಿಂತು ಸಮರ್ಥವಾಗಿ ಚುನಾವಣೆ ಎದುರಿಸಿ ಗೆದ್ದು ಬನ್ನಿ, ವಿಧಾನಸಭೆಯಲ್ಲಿ 136 ಸ್ಥಾನ ಗೆಲ್ಲುತ್ತೀವಿ ಎಂದು ಯಾರೂ ಹೇಳಿರಲಿಲ್ಲ. ಲೋಕಸಭೆಯಲ್ಲೂ ನಮಗೆ 20 ಸ್ಥಾನದವರೆಗೂ ಖಚಿತವಾಗಿ ಗೆಲ್ಲುವ ಅವಕಾಶಗಳಿವೆ.

ನಮ್ಮ ಗ್ಯಾರಂಟಿಗಳ ಬಗ್ಗೆ ನಾಡಿನ ಜನತೆಗೆ, ನಮ್ಮ ಹೆಣ್ಣು ಮಕ್ಕಳಿಗೆ, ತಾಯಂದರಿಗೆ ಧನ್ಯತೆ ಇದೆ. ಅವರಲ್ಲಿ ಕೈ ಮುಗಿದು ಮತ ಕೇಳಿ. ಕಾರ್ಯಕರ್ತರನ್ನು, ಸ್ಥಳೀಯ ಮುಖಂಡರನ್ನು ಮಾತಾಡಿಸಿ, ಪ್ರತಿಯೊಬ್ಬರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ. ಪ್ರತಿಷ್ಠೆ ಬೇಡ, ಎಲ್ಲಾ ರೀತಿಯ ಅಧಿಕಾರ ದುರುಪಯೋಗ ಮಾಡಿ ನಮಗೆ ತೊಂದರೆ ಕೊಡುತ್ತಾರೆ. ನಾವು ಎದೆಗಾರಿಕೆಯಿಂದ ಎದುರಿಸಿ ಜನರಿಂದ ಶಕ್ತಿ ಪಡೆದುಕೊಳ್ಳಬೇಕು. ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ.

ವೈಜ್ಞಾನಿಕವಾಗಿ ಪ್ರಚಾರ ಮಾಡಿ ಅರ್ಥಪೂರ್ಣ ವಾಗಿ ಚುನಾವಣೆ ನಡೆಸೋಣ, ಕ್ಷೇತ್ರದಲ್ಲಿ ಅಸಮಾಧಾನಿತ ಮುಖಂಡರು ಇದ್ದರೆ ಹೋಗಿ ಮನವೊಲಿಕೆ ಮಾಡಿ. ಯಾವುದೇ ಪ್ರತಿಷ್ಠೆ ಇಟ್ಟುಕೊಳ್ಳಬೇಡಿ. ಕ್ರಿಯಾಶೀಲ ಕಾರ್ಯಕರ್ತರನ್ನ ಭೇಟಿ ಮಾಡಿ. ಆ ಮೂಲಕ ಪ್ರತಿಯೊಬ್ಬರನ್ನ ತಲುಪುವ ಕೆಲಸ ಮಾಡಿ, ಪ್ರಚಾರದ ಸಂದರ್ಭದಲ್ಲಿ ಆ ಭಾಗದ ಪ್ರಮುಖ ನಾಯಕರ ನಿವಾಸಕ್ಕೆ ಭೇಟಿ ನೀಡಿ. ಚುನಾವಣಾ ಸಂದರ್ಭದಲ್ಲಿ ಒಗ್ಗಟ್ಟು ಬಹಳ ಮುಖ್ಯ. ಎಲ್ಲರನ್ನೂ ಜತೆಗೆ ತೆಗೆದುಕೊಂಡು ಹೋಗಿ. ರೋಡ್ ಶೋ ಮಾಡುವಾಗ ಸಮನ್ವಯ ಬಹಳ ಮುಖ್ಯ ಆಯೋಜನೆ ಮಾಡುವಾಗ ಎಚ್ಚರಿಕೆ ಪ್ಲ್ಯಾನ್ ಮಾಡಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು