ಬೆಂಗಳೂರು: ರಾಜ್ಯದಲ್ಲಿ ಕೃಷ್ಣಾಷ್ಟಮಿ ಸಂಭ್ರಮ ಮನೆ ಮಾಡಿದೆ. ಪ್ರತಿ ಮನೆ ಮನಗಳಲ್ಲಿಯೂ ದುಷ್ಟ ಶಿಕ್ಷಕ ಶಿಷ್ಟ ರಕ್ಷಕ ಕೃಷ್ಣನನ್ನು ಪೂಜಿಸಿ ಆರಾಧಿಸಲಾಗುತ್ತಿದೆ. ಅದೇ ರೀತಿ ಎಳೆಯ ಕಂದಮ್ಮಗಳಿಗೂ ಕೃಷ್ಣನ ವೇಷ ತೊಡಿಸಿ ಮಕ್ಕಳಲ್ಲಿ ದೇವರನ್ನು ಕಾಣುವ ಸಂಸ್ಕೃತಿ ನಮ್ಮದು. ಈ ನಿಟ್ಟಿನಲ್ಲಿ ಚಿತ್ರ ತಾರೆಯರೂ ಹಿಂದೆ ಬಿದ್ದಿಲ್ಲ.
ರಿಷಬ್ ಶೆಟ್ಟಿ ಅವರು ಮಕ್ಕಳ ಜೊತೆ ಕೃಷ್ಣಾಷ್ಟಮಿ ಆಚರಿಸಿದ್ದಾರೆ. ಮಕ್ಕಳಿಗೆ ಕೃಷ್ಣನ ವೇಷ ಹಾಕಿ ಅವರು ಸಂಭ್ರಮಿಸಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ. ಅಭಿಮಾನಿಗಳು ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಪ್ರಗತಿ ಶೆಟ್ಟಿ-ರಿಷಬ್ ಶೆಟ್ಟಿ ದಂಪತಿಗೆ ಇಬ್ಬರು ಮಕ್ಕಳು. ಮಗನಿಗೆ ರಣ್ವಿತ್ ಶೆಟ್ಟಿ ಎಂದು ಹೆಸರು ಇಡಲಾಗಿದೆ. ಮಗಳಿಗೆ ರಾಧ್ಯ ಎಂದು ನಾಮಕರಣ ಮಾಡಲಾಗಿದೆ. ಇವರು ಆಗಾಗ ಮಕ್ಕಳ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.
ಕೃಷ್ಣನ ಅವತಾರದಲ್ಲಿ ರಣ್ವಿತ್ ಹಾಗೂ ರಾಧ್ಯ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಅಭಿಮಾನಿಗಳು ಸಖತ್ ಇಷ್ಟಪಡುತ್ತಿದ್ದಾರೆ. ಇವರ ಜೊತೆ ರಿಷಬ್ ಕೂಡ ಇರಬೇಕಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…
ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…
ದೇಶದ್ಯಾಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.