ಮೈಸೂರು ಯುವ ದಸರಾಗೆ ಚಾಲನೆ ನೀಡಲಿರುವ ನಟ ಶಿವರಾಜ್‌ಕುಮಾರ್

ಬೆಂಗಳೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ, ಯುವ ದಸರಾ ಅ.18ರಿಂದ 21ರವರೆಗೆ ನಡೆಯಲಿದ್ದು, ಅ.18ರಂದು ಸಂಜೆ ನಟ ಶಿವರಾಜ್‌ಕುಮಾರ್ ಯುವ ದಸರಾಗೆ ಚಾಲನೆ ನೀಡಲಿದ್ದಾರೆ.

ಅಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸೇರಿದಂತೆ ಹಲವು ಗಣ್ಯರು ಭಾಗವಹಿಸುವರು. ನಂತರ ಸ್ಯಾಂಡಲ್‌ವುಡ್ ನೈಟ್ ಇರಲಿದ್ದು, ನಟ ಸಾಧುಕೋಕಿಲಾ ತಂಡದಿಂದ ಕಾರ್ಯಕ್ರಮ ನಡೆಯಲಿದೆ. 19ರಂದು ಗಾಯಕ ಸಂಚಿತ್ ಹೆಗ್ಡೆ, ಶಿಲ್ಪಾರಾವ್, 20ರಂದು ಆಲ್ ಓಕೆ ತಂಡದಿಂದ ಕಾರ್ಯಕ್ರಮವಿರಲಿದ್ದು, ನಂತರ ಫ್ಯಾಶನ್ ಶೋ ನಡೆಯಲಿದೆ. ಬಳಿಕ ಸಲಿಂ ಸುಲೇಮಾನ್ ಕಾರ್ಯಕ್ರಮ ನಡೆಸಿಕೊಡುವರು. ಕಡೆಯ ದಿನವಾದ 21ರಂದು ಮೊದಲಿಗೆ ಮೋಹನ ಸಿಸ್ಟರ್ಸ್ ತಂಡದಿಂದ ಕಾರ್ಯಕ್ರಮವಿರಲಿದ್ದು, ಬಳಿಕ ಗಾಯಕ ಬಿನ್ನಿ ದಯಾಳ್ ಅವರ ಕಾರ್ಯಕ್ರಮದೊಂದಿಗೆ ಯುವ ದಸರಾಗೆ ತೆರೆ ಬೀಳಲಿದೆ. ಪಾಸ್ ವಿತರಣೆ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಕೇಂದ್ರ ರಕ್ಷಣಾ ಇಲಾಖೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ವೈಮಾನಿಕ ಪ್ರದರ್ಶನವನ್ನು ಅ.23ರಂದು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದೆ. 22ರಂದು ರಿಹರ್ಸಲ್ ನಡೆಯಲಿದ್ದು, 23ರಂದು ಸಂಜೆ 4ರಿಂದ 5ರವರೆಗೆ ಮುಖ್ಯ ಪ್ರದರ್ಶನ ನಡೆಯಲಿದೆ. ಅಂದೇ ಪಂಜಿನ ಕವಾಯತು ರಿಹರ್ಸನ್ ನಡೆಯುವುದರಿಂದ ಎರಡೂ ಕಾರ್ಯಕ್ರಮಕ್ಕೆ ಒಂದೇ ಪಾಸ್ ನೀಡಬೇಕೆ ಬೇಡವೇ ಎಂಬ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಇದರ ಜತೆಗೆ ಪ್ಯಾರಾ ಮೋಟರಿಂಗ್, ಹೆಲಿ ರೈಡ್‌ಗೂ ಅವಕಾಶ ನೀಡಲಾಗಿದೆ.

ಈ ಬಾರಿಯ ಜಂಬೂ ಸವಾರಿಯನ್ನು ಆಕರ್ಷಕವಾಗಿಸಲು ನಿರ್ಧರಿಸಿದ್ದು, ಚಿನ್ನದ ಅಂಬಾರಿ ಮುಂಭಾಗ 200 ಮಂದಿ ದರ್ಬಾರ್ ಸಮವಸ್ತ್ರ ಧರಿಸಿ ಸಾಗಲಿದ್ದಾರೆ. ಇದಕ್ಕಾಗಿ ಅರಮನೆ ಮಂಡಳಿಯಿಂದ ವಿಶೇಷ ಸಮವಸ್ತ್ರ ಸಿದ್ಧಪಡಿಸಲು ಟೆಂಡರ್ ನೀಡಲಾಗಿದೆ. ಎಲ್ಲಾ ಜಿಲ್ಲೆಗಳಿಂದಲೂ ಸ್ತಬ್ಧಚಿತ್ರಗಳು ಭಾಗವಹಿಸಲಿದ್ದು, ಕೆಲ ದಿನಗಳಲ್ಲಿ ಎಷ್ಟು ಸ್ತಬ್ಧಚಿತ್ರಗಳು ಪಾಲ್ಗೊಳ್ಳುತ್ತಿವೆ 300ಕ್ಕೂ ಹೆಚ್ಚು ಕಲಾತಂಡಗಳು ಅರ್ಜಿ ಸಲ್ಲಿಸಿದ್ದಾರೆ.

Ashika S

Recent Posts

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

7 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

9 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

34 mins ago

ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಮಿಂಚಿದ ಕನ್ನಡತಿಯ ದುರಂತ ಅಂತ್ಯ

ತೆಲುಗು ಸಿನಿಮಾ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ ಬಹಳಷ್ಟು ಕನ್ನಡಿಗರು ಸಕ್ಸಸ್ ಕಂಡಿದ್ದಾರೆ. ತೆಲುಗು ಕಿರುತೆರೆಯಲ್ಲಿ ಕರ್ನಾಟಕದ ಕಲಾವಿದರಿಗೆ ಸಾಕಷ್ಟು ಬೇಡಿಕೆಯೂ…

46 mins ago

ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರೋದೇ ಡೌಟ್; ರಿಟರ್ನ್‌ ಟಿಕೆಟ್‌ ಕ್ಯಾನ್ಸಲ್

ಹಾಸನದ ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್‌ಡ್ರೈವ್‌ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ…

1 hour ago

ರಾಧಾ ರಮಣ ಧಾರವಾಹಿಯ ಜನಪ್ರಿಯ ನಟಿ ಪವಿತ್ರ ಜಯರಾಂ ನಿಧನ

ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.

1 hour ago