News Karnataka Kannada
Tuesday, April 30 2024
ಬೆಂಗಳೂರು

ಹಿರಿಯ ನಟ ದ್ವಾರಕೀಶ್‌ ನಿಧನಕ್ಕೆ ನಟ,ನಟಿ ಹಾಗೂ ಗಣ್ಯರಿಂದ ಸಂತಾಪ ಸೂಚನೆ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿದ್ದ ದ್ವಾರಕೀಶ್‌ ಅವರ ನಿಧನಕ್ಕೆ ನಟ ನಟಿಯರು ಹಾಗೂ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.
Photo Credit : NewsKarnataka

ಬೆಂಗಳೂರು:  ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿದ್ದ ದ್ವಾರಕೀಶ್‌ ಅವರ ನಿಧನಕ್ಕೆ ನಟ ನಟಿಯರು ಹಾಗೂ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಟ್ವೀಟ್ ಮಾಡಿ.. ಕನ್ನಡ ಚಿತ್ರರಂಗ ಕಂಡ ಖ್ಯಾತ ಕಲಾವಿದ, ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಶ್ರೀ ದ್ವಾರಕೀಶ್ ವಿಧಿವಶರಾದ ಸುದ್ದಿ ಅತ್ಯಂತ ಆಘಾತ ಉಂಟುಮಾಡಿದೆ. ನಾಡಿನ ದಿಗ್ಗಜ ಕಲಾವಿದರೊಂದಿಗೆ ನಟಿಸಿ, ಅವರ ಸಿನಿಮಾಗಳನ್ನು ನಿರ್ಮಿಸಿದ್ದ ದ್ವಾರಕೀಶ್ ಅವರ ನಿಧನದಿಂದ ಚಿತ್ರರಂಗ ಒಬ್ಬ ಸಾಧಕ ಕಲಾವಿದನನ್ನು ಕಳೆದುಕೊಂಡಿದೆ ಎಂದು ಸಾಮಾಜಿಕಾ ಜಾಲತಾಣ ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ
ನಟ ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗಕ್ಕೆ ಸೇವೇಗೈದ ಕನ್ನಡಿಗರ ಪ್ರೀತಿಯ ʻಪ್ರಚಂಡ ಕುಳ್ಳʼ ದ್ವಾರಕೀಶ್‌ ಅವರ ನಿಧನನದ ಸುದ್ದೀ ತಿಳಿದು ದುಃಖವಾಯಿತು. ಹಾಸ್ಯಭರಿತ ನಟನೆಯ ಮೂಲಕ ನೋಡುಗರ ಮನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು. ಅವರ ನಿಧನದಿಂದ ಕನ್ನಡ ಚಿತ್ರರಂಗ ಬಡವಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಶಿವರಾಜ್‌ ಕುಮಾರ್‌
ಚಿಕ್ಕವಯಸ್ಸಿನಿಂದಲೂ ಅವರೊಂದಿಗೆ ಒಡನಾಡಿದೇನೆ. ಅಪ್ಪಾಜಿ ಜೊತೆಗೆ ಅವರಿಗೆ ಒಡನಾಟ ಹೆಚ್ಚಿತ್ತು. ದ್ವಾರಕೀಶ್‌ ಅವರ ಪ್ರೊಡಕ್ಷನ್ಸ್‌ನಲ್ಲಿ ನಾನು ಆಯುಷ್ಮಾನ್‌ಭವ ಸಿನಿಮಾ ಮಾಡಿದ್ದೇನೆ.ಕನ್ನಡ ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ ಎಂದರು. ಶಿವರಾಜಕುಮಾರ್‌

ನಟ ಸುದೀಪ್‌
ಕನ್ನಡ ಚಿತ್ರರಂಗದ ಮತ್ತೊಂದು ಅಮೂಲ್ಯ ಜೀವವನ್ನು ಕಳೆದುಕೊಂಡಿದ್ದೇವೆ. ಕನ್ನಡ ಚಲನಚಿತ್ರ ರಂಗವನ್ನು ಎತ್ತರಕ್ಕೆ ಕೊಂಡೊಯ್ಯುವಲ್ಲಿ ಅವರ ಮಹಾನ್‌ ಕೊಡುಗೆಗಳನ್ನು ಮರೆಯಲಾಗದು, ಮರೆಯಕೂಡದು.

ಹಿರಿಯ ನಟ ದೊಡ್ಡಣ್ಣ
ಅವರೊಬ್ಬ ಪ್ರಚಂಡ ಸಾಹಸಿ. ಚಿತ್ರರಂಗದ ಎಲ್ಲ ವಿಭಾಗಗಳ ನೇತೃತ್ವ ವಹಿಸಿದವರು. ಜೀವನದಲ್ಲಿ ಹಲವು ಏರಿಳಿತಗಳನ್ನು ಕಂಡರು.ʻಮುದ್ದಿನ ಮಾವ ಸಿನಿಮಾ ಜೀವನದಲ್ಲಿ ಮಾರೆಯಲು ಸಾಧ್ಯವಿಲ್ಲ. ದೊಡ್ಡಣ್ಣ

ನಟ ದರ್ಶನ್‌ ಕೂಡ ತಮ್ಮ ಎಕ್ಸ್‌ ಖಾತೆಯಲ್ಲಿ ದ್ವಾರಕೀಶ್‌ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರರಂಗದ ಧೀಮಂತ ನಿರ್ಮಾಪಕರಾಗಿ, ನಿರ್ದೇಶಕರಾಗಿ, ಜನಮೆಚ್ಚಿದ ಹಾಸ್ಯನಟ ‘ಪ್ರಚಂಡ ಕುಳ್ಳ’ನಾಗಿ ೫ ದಶಕಗಳು ಸೇವೆಸಲ್ಲಿಸಿದ ನಮ್ಮೆಲ್ಲರ ಪ್ರೀತಿಯ ದ್ವಾರಕೀಶ್ ಸರ್ ರವರು ಇಂದು ಇಹಲೋಕ ತ್ಯಜಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ ಎಂದು ತಮ್ಮ ಭಾವನೆ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು