ಬೆಂಗಳೂರು: ಭಾರತದ ಮಹತ್ವಾಕಾಂಕ್ಷೆಯ ಸೂರ್ಯಯಾನ ಯೋಜನೆಯ ಅಡಿಯಲ್ಲಿ ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯನ್ನು ಶನಿವಾರ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.
ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಆದಿತ್ಯ L1 ಹೊತ್ತ ಪಿಎಸ್ಎಲ್ವಿ ರಾಕೆಟ್ನ ಉಡಾವಣೆ ಯಶಸ್ವಿಯಾಗಿದೆ ಎಂದು ಭಾರಾತೀಯ ಬಾಹ್ಯಾಕಾಶ ವಿಜ್ಞಾನ ಸಂಶೋಧನಾ ಸಂಸ್ಥೆ ಇಸ್ರೋ (ISRO) ತಿಳಿಸಿದೆ. ಆ ಮೂಲಕ ಭಾರತವು ಬಾಹ್ಯಕಾಶ ಸಂಶೋಧನಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದಂತಾಗಿದೆ.
ಈ ಕ್ಷಣಕ್ಕೆ ಶ್ರೀಹರಿಕೋಟಾದಲ್ಲಿ ಸೇರಿದ್ದ ಸಾವಿರಾರು ಮಂದಿ ಸಾಕ್ಷಿಯಾದರೆ, ಆನ್ಲೈನ್ ನೇರ ಪ್ರಸಾರದ ಮೂಲಕ ಕೋಟ್ಯಂತರ ಮಂದಿ ವೀಕ್ಷಣೆ ಮಾಡಿದರು.