ಬೆಂಗಳೂರು: ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜಿ-ನೆಟ್ ಕಂಪನಿ ಮಾಲೀಕ, ಎಎಪಿ ಮುಖಂಡ ಅರುಣ್ ಕುಮಾರ್ನನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅರುಣ್ ಕುಮಾರ್ ಎಂಡಿ ಫಣೀಂದ್ರ, ಸಿಇಒ ವಿನುಕುಮಾರ್ ಕೊಲೆಗೆ ಸುಪಾರಿ ನೀಡಿದ್ದಾಗಿ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ.
ಅಮೃತಹಳ್ಳಿ ಪೊಲೀಸರು ಆರೋಪಿ ಅರುಣ್ನನ್ನು ಬಂಧಿಸಿ ವಿಚಾರಣೆ ನಡೆಸಿದ್ದು ಜೋಕರ್ ಫಿಲೆಕ್ಸ್ಗೆ ಸುಪಾರಿ ನೀಡಿದ್ದಾಗಿ ಅರುಣ್ ಒಪ್ಪಿಕೊಂಡಿದ್ದಾನೆ. ಕೊಲೆಯಾದ ಫಣೀಂದ್ರ, ವಿನುಕುಮಾರ್ ಇಬ್ಬರೂ ಜಿ-ನೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿ ಫಿಲೆಕ್ಸ್ ಕೂಡಾ ಇದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆದ್ರೆ ಫಣೀಂದ್ರ, ವಿನುಕುಮಾರ್ ಜಿ-ನೆಟ್ ಕಂಪನಿ ಬಿಟ್ಟು ಹೊಸ ಕಂಪನಿ ಆರಂಭಿಸಿದ್ದರು. ಜಿ-ನೆಟ್ ಕಂಪನಿಯ ಹಲವು ನೌಕರರು ಫಣೀಂದ್ರ ಕಂಪನಿಗೆ ಸೇರಿದ್ದರು. ಇದರಿಂದ ಜಿ-ನೆಟ್ ಕಂಪನಿ ನಷ್ಟಕ್ಕೆ ಸಿಲುಕಿತ್ತು. ಇದರಿಂದ ಅರುಣ್ ಆಕ್ರೋಶಗೊಂಡಿದ್ದ. ಹೀಗಾಗಿ ಫಣೀಂದ್ರ ಕೊಲೆಗೆ ಫಿಲೆಕ್ಸ್ಗೆ ಸುಪಾರಿ ನೀಡಿದ್ದ ಎಂದು ವಿಷಯ ತಿಳಿದು ಬಂದಿದೆ.