ಬೆಂಗಳೂರು: ಬಿಜೆಪಿಯನ್ನು ಕಟ್ಟಿಹಾಕಲು ಕಾಂಗ್ರೆಸ್ ನಾಯಕರು ಬೆಂಗಳೂರಲ್ಲಿ ಇಂದಿನಿಂದ ಒಗ್ಗಟ್ಟು ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ಆದ್ರೆ, ಹೆಚ್ಡಿ ಕುಮಾರಸ್ವಾಮಿ ಬಿಜೆಪಿ ಜೊತೆ ಸಖ್ಯ ಬೆಳೆಸಲು ದೆಹಲಿಗೆ ತೆರಳುವ ಸಾಧ್ಯತೆ ದಟ್ಟವಾಗಿದೆ. ತೆನೆ ಹೊತ್ತ ಮಹಿಳೆ ಬಹುತೇಕ ಕಮಲ ಮುಡಿಯೋದು ಫಿಕ್ಸ್ ಆಗಿದ್ದು, ದೆಹಲಿಯಲ್ಲಿ ಅಂತಿಮ ಮುದ್ರೆ ಬೀಳುವ ಸಾಧ್ಯತೆ ದಟ್ಟವಾಗಿದೆ ಎಂಬುವುದು ಸದ್ಯ ರಾಜಕೀಯ ವಲಯದ ಮಾತು.
ಇಂದು ಅಥವಾ ನಾಳೆ ಹೆಚ್.ಡಿ ಕುಮಾರಸ್ವಾಮಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, NDA ಸಭೆಗೂ ಮುನ್ನ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸುವ ಸಾಧ್ಯತೆ ಇದೆ. ಈಗಾಗಲೇ ಪ್ರಧಾನಿ ಮೋದಿ ಜತೆಗೆ ಉತ್ತಮ ಬಾಂಧವ್ಯದ ಮಾತುಗಳನ್ನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಕಮಲ ಮುಡಿಯುವು ಫಿಕ್ಸ್ ಆಗಿದೆ ಎನ್ನಲಾಗ್ತಿದೆ.
ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಜೆಡಿಎಸ್ ಜೊತೆ ಮೈತ್ರಿ ನಮ್ಮ ವರಿಷ್ಠರಿಗೆ ಬಿಟ್ಟಿದ್ದು ಎಂದಿದ್ದಾರೆ.