ಬೆಂಗಳೂರು: ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.
ಮುಷ್ಕರ ಸಂಬಂಧ ಸೋಮವಾರ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಮಂಗಳವಾರ ಇಲಾಖೆ ಆಯುಕ್ತರು ಆಂಬುಲೆನ್ಸ್ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿದರು.
ಆದರೆ ಮಾತುಕತೆ ಲಪ್ರದವಾಗಲಿಲ್ಲ. ಈ ಕುರಿತು ಸಚಿವರು ತೀರ್ಮಾನ ಕೈಗೊಳ್ಳಲು ನೀತಿ ಸಂಹಿತೆ ಅಡ್ಡಿಯಾಗಿದೆ. ನೀತಿ ಸಂಹಿತೆ ತೆರವಾದ ನಂತರ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಚುನಾವಣೆ ಲಿತಾಂಶ ನಂತರ ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು 108 ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಎನ್.ಎಚ್.ಪರಮಶಿವ ಹೇಳಿದರು.