ಬೆಂಗಳೂರು: ಕರ್ನಾಟಕದಲ್ಲಿ ಎನ್ಡಿಎ ಮೈತ್ರಿಕೂಟದ ನೇತೃತ್ವ ವಹಿಸುವಂತೆ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಆಹ್ವಾನಿಸಿದ್ದರು.
ಉಭಯ ನಾಯಕರು ದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ವೇಳೆ, ಅಮಿತ್ ಶಾ ಅವರನ್ನು ಕುಮಾರಸ್ವಾಮಿ ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದರು. ಸದ್ಯದಲ್ಲೇ ಬೆಂಗಳೂರಿಗೆ ಬಿಜೆಪಿ ಚಾಣಕ್ಯ ಅಮಿತ್ ಶಾ ಆಗಮಿಸಲಿದ್ದು, ತಮ್ಮ ನಿವಾಸಕ್ಕೆ ಕುಮಾರಸ್ವಾಮಿ ಆಹ್ವಾನಿಸುವ ಸಾಧ್ಯತೆ ಇದೆ.
ನಾಳೆ, ಅಂದರೆ ಫೆಬ್ರವರಿ 10 ರಂದು ಅಮಿತ್ ಶಾ ಅವರನ್ನು ಕುಮಾರಸ್ವಾಮಿ ತನ್ನ ನಿವಾಸಕ್ಕೆ ಉಪಹಾರ ಅಥವಾ ರಾತ್ರಿ ಭೋಜನಕ್ಕೆ ಆಹ್ವಾನಿಸುವ ಸಾಧ್ಯತೆ ಇದೆ. ಈ ವೇಳೆ ರಾಜ್ಯ ರಾಜಕೀಯದ ಬಗ್ಗೆಯೂ ಚರ್ಚೆ ನಡೆಯಲಿದೆ.
ಇತ್ತೀಚೆಗೆ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದರು. ಈ ವೇಳೆ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಎನ್ಡಿಎ ಮೈತ್ರಿಕೂಟದ ನೇತೃತ್ವ ವಹಿಸುವಂತೆ ಕುಮಾರಸ್ವಾಮಿ ಅವರಲ್ಲಿ ಅಮಿತ್ ಶಾ ಕೋರಿದ್ದರು. ಲೋಕಸಭೆ ಚುನಾವಣೆ ದೃಷ್ಟಿಯಿಂದ ಬಿಜೆಪಿ ನಾಯಕರ ಜತೆ ಸಮನ್ವಯ ಸಾಧಿಸಲು ಕುಮಾರಸ್ವಾಮಿ ನೇತೃತ್ವ ವಹಿಸಲಿ ಎಂಬ ಅಭಿಪ್ರಾಯವನ್ನು ಅಮಿತ್ ಶಾ ವ್ಯಕ್ತಪಡಿಸಿದ್ದಾರೆ.