ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಂಚಲನ ಸೃಷ್ಟಿಸಿದ್ದ ಬಿಟ್ ಕಾಯಿನ್ ಹಗರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಇದರ ಕುರಿತಾದ ತನಿಖೆ ನಡೆಯುತ್ತಲೇಯಿದೆ.ಇದೀಗ ಈ ತನಿಖೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಭೂಗತವಾಗಿದ್ದ ನಟೋರಿಯಸ್ ಹ್ಯಾಕರ್ ಸಿಕ್ಕಿಬಿದ್ದಿದ್ದಾನೆ. ಇಂಟರ್ ನ್ಯಾಷನಲ್ ಹ್ಯಾಕರ್ನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶ್ರೀಕಿಗೂ ಮುನ್ನವೇ ಹ್ಯಾಕಿಂಗ್ನಲ್ಲಿ ಕೈಚಳಕ ತೋರಿ ಭೂಗತವಾಗಿದ್ದ ಪಂಜಾಬ್ ಮೂಲದ ನಟೋರಿಯಸ್ ಹ್ಯಾಕರ್ ರಾಜೇಂದ್ರ ಸಿಂಗ್ನನ್ನು ಎಸ್ಐಟಿ ಬಂಧಿಸಿದ್ದು, ಈ ಪ್ರಕರಣದಲ್ಲಿ ಮತ್ತಷ್ಟು ಸತ್ಯ ಹೊರಬರುವ ಸಾಧ್ಯತೆಗಳಿವೆ.
ಶ್ರೀಕಿಯಿಂದ ಸುಮಾರು 9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ವಶಕ್ಕೆ ಪಡೆದಿದ್ದ ಸಿಸಿಬಿ, ತನಿಖೆ ವೇಳೆಯಲ್ಲಿ ಪಂಜಾಬ್ ನ ರಾಜೇಂದ್ರ ಸಿಂಗ್ ಹೆಸರು ಕೇಳಿಬಂದಿತ್ತು. ಶ್ರೀಕಿಗೂ ಮುನ್ನವೇ ಹ್ಯಾಕಿಂಗ್ನಲ್ಲಿ ಕೈಚಳಕ ತೋರಿ ಭೂಗತವಾಗಿದ್ದ ರಾಜೇಂದ್ರ ಸಿಂಗ್ನ್ನನು ಸಿಐಡಿ ಎಡಿಜಿಪಿ ಮನೀಶ್ ಖರ್ಬೀಕರ್ ನೇತೃತ್ವದಲ್ಲಿ ಬಂಧಿಸಲಾಗಿದೆ. ಈತ ಸರ್ಕಾರಿ ಹಾಗೂ ಖಾಸಗಿ ವೆಬ್ ಸೈಟ್ ಗಳನ್ನು ಹ್ಯಾಕ್ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿ ಬಯಲಾಗಿದೆ.