ಬೆಂಗಳೂರು: ಆರ್ಸಿಬಿಯ ಸೋಲಿನ ಹಿನ್ನಲೆ ‘ಗಜಪಡೆ’ ಹೆಸರಿನ ಟ್ವಿಟರ್ ಖಾತೆ ಮೂಲಕ ವ್ಯಕ್ತಿಯೋರ್ವ ಅಶ್ವಿನಿ ಅವರ ಬಗ್ಗೆ ತುಂಬಾನೇ ಕೀಳುಮಟ್ಟದ ಪದ ಬಳಕೆ ಮಾಡಿದ್ದ. ಹಾಗೂ ಖಾತೆಯನ್ನು ದರ್ಶನ್ ಅಭಿಮಾನಿ ಎಂದು ಹೇಳಲಾಗಿದೆ. ಹಾಗೂ ಈ ಸಂಬಂಧ ಪೋಸ್ಟ್ ಮಾಡಿದವರ ವಿರುದ್ಧ ಕ್ರ ಕೂಡ ತೆಗೆದುಕೊಳ್ಳಲಾಗಿತ್ತು.
ಏನಿದು ಪ್ರಕರಣ,
‘ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್ಸಿಬಿ ಸೋಲುತ್ತಿದೆ’ ಎಂದು ‘ಗಜಪಡೆ’ (@GAJAPADE6) ಹೆಸರಿನ ಟ್ವಿಟರ್ ಅಕೌಂಟ್ ಕೀಳು ಮಟ್ಟದ ಟ್ವೀಟ್ ಮಾಡಿತ್ತು. ಆರ್ಸಿಬಿ ಸೋಲುವುದಕ್ಕೂ, ಅಶ್ವಿನಿ ಪುನೀತ್ ರಾಜ್ಕುಮಾರ್ಗೂ ಏನು ಸಂಬಂಧ? ಎಂದು ಅಪ್ಪು ಫ್ಯಾನ್ಸ್ ಆಕ್ರೋಶ ಹೊರಹಾಕಿ, ಈಗಾಗಲೇ ಅಪ್ಪು ಫ್ಯಾನ್ಸ್ ಕಾನೂನು ಕ್ರಮ ಮುಂದಾಗಿದ್ದಾರೆ.
ಈ ಕುರಿತು, ಪಿಆರ್ಕೆ ಸ್ಟುಡಿಯೊ ಅಡಿಯಲ್ಲಿ ನಿರ್ಮಾಣಗೊಂಡಿರುವ ‘ಓ2’ ಸಿನಿಮಾದ ಸುದ್ಧಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದ ಅಶ್ವಿನಿ, ʻʻಬೇರೆ ಆಯ್ಕೆ ಇಲ್ಲ.. ಜೀವನ ಅಂದುಕೊಂಡಷ್ಟು ಸುಲಭವಿಲ್ಲ, ಜೀವನ ಹೇಗೋ ನಡೆದುಕೊಂಡು ಹೋಗುತ್ತಿದೆ. ಕಷ್ಟ ಇದ್ದರೂ ಎಲ್ಲವನ್ನು ಸ್ವೀಕರಿಸಬೇಕುʼʼಎಂದು ಸಮಾಧಾನವಾಗಿ ಪ್ರತಿಕ್ರಿಯೆ ನೀಡಿದ್ದಾರೆ.