ಬಾಯ್‌ಫ್ರೆಂಡ್‌ ಜೊತೆಗೆ ಸೇರಿ ಮಗುವಿನ ಮೇಲೆ ತಾಯಿಯಿಂದ ಹಲ್ಲೆ!

ಬೆಂಗಳೂರು: ಹೆತ್ತ ತಾಯಿ ತನ್ನ 4 ವರ್ಷ ಮಗುವಿನ ಮೇಲೆ ಅಮಾನುಷ ಕೃತ್ಯವೆಸಗಿರುವ ಘಟನೆ ಗಿರಿನಗರದಲ್ಲಿ ಬೆಳಕಿಗೆ ಬಂದಿದೆ. ಬಾಯ್ ಫ್ರೆಂಡ್ ಜೊತೆ ಸೇರಿ ತಾಯಿ ತನ್ನ ಮಗುವಿನ ಮೇಲೆ ದಿನನಿತ್ಯ ಹಲ್ಲೆ ಮಾಡುತ್ತಾ ಬಂದಿದ್ದಾಳೆ.

ತಾಯಿಯ ಹಲ್ಲೆಯಿಂದ ಮಗುವಿನ ದೇಹದ ಮೇಲೆಲ್ಲಾ ಗಾಯಗಳಾಗಿವೆ. ತಾಯಿ ಬೆಳಗ್ಗೆ ಕೆಲಸಕ್ಕೆ ಹೋಗುವಾಗ ಮಗುವನ್ನು ಮನೆಯಲ್ಲಿ ಬಿಟ್ಟು ಬೀಗ ಹಾಕಿ ಹೋದರೆ, ರಾತ್ರಿ ಬರೋವರೆಗೂ ಕೂಡಿ ಹಾಕಿರೋದು ಬೆಳಕಿಗೆ ಬಂದಿದೆ.

ಎರಡು ವಾರಗಳ ಹಿಂದೆ ನಡೆದಿರುವ ಘಟನೆ ಇದಾಗಿದೆ. ಮಹಿಳೆಯನ್ನು ಶಾರಿನ್ ಎಂದು ಗುರುತಿಸಲಾಗಿದೆ. ಈಕೆಗೆ ಶಂಕರ್​ ಎಂಬಾತನ ಜೊತೆಗೆ ಈಗಾಗಲೇ ವಿವಾಹವಾಗಿದ್ದು, ಆದರೆ ಮಹಿಳೆ ಗಂಡನ ಜೊತೆಗೆ ವಾಸಿಸುತ್ತಿಲ್ಲ. ಹಣಕಾಸಿನ ತೊಂದರೆಯಿಂದ ಮಗುವನ್ನ ಮನೆಯಲ್ಲೇ ಕೂಡಿಹಾಕಿ ಹೋಗುತ್ತಿದ್ದಳು. ಕೆಲಸ ಹುಡುಕಲು ಮನೆಯಲ್ಲಿ ಮಗುವನ್ನ ಬಿಟ್ಟು ಹೋಗಿರುವುದಾಗಿ ತಾಯಿ ಹೇಳಿದ್ದಾಳೆ.

ಇನ್ನು ಮಧ್ಯಾಹ್ನ ಮಗುವಿಗೆ ಊಟ ಕೊಡೋಕೆ ಅಂತಾ ಮಹಿಳೆಯ ಫ್ರೆಂಡ್ ಮನೆಗೆ ಬರುತ್ತಿದ್ದನಂತೆ. ಆದರೆ ಮಗುವಿನ ಮೈಮೇಲೆಲ್ಲಾ ಪೂರ್ತಿ ಗಾಯಗಳಾಗಿದ್ದು, ತಾಯಿ ಮತ್ತು ಅಂಕಲ್​ ನನಗೆ ಹಲ್ಲೆ ಮಾಡುವುದಾಗಿ ಮಗು ಹೇಳಿಕೊಂಡಿದೆ. ಇನ್ನು ಈ ಘಟನೆ ಸಂಬಂಧ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ನಾಗವೇಣಿ ಮಗುವಿನ ರಕ್ಷಣೆ ಮಾಡಿದ್ದಾರೆ. ಸದ್ಯ ಶಿಶು ಮಂದಿರದಲ್ಲಿ ಮಗುವಿನ ಪಾಲನೆ ಮಾಡಲಾಗುತ್ತಿದೆ. ಕೌನ್ಸಿಲಿಂಗ್ ವೇಳೆ ತಾಯಿ ಜೊತೆ ಹೋಗಲು ಮಗು ನಿರಾಕರಿಸಿದೆ. ನಾಳೆ ಮತ್ತೊಂದು ಸುತ್ತಿನ ಕೌನ್ಸಿಲಿಂಗ್ ಗಾಗಿ CWC ತಾಯಿಗೆ ನೋಟಿಸ್ ನೀಡಿದೆ.

Ashitha S

Recent Posts

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

39 mins ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

1 hour ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

1 hour ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

2 hours ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

2 hours ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

2 hours ago