News Karnataka Kannada
Sunday, April 28 2024
ಬೆಂಗಳೂರು

ಬೆಂಗಳೂರು: ಗ್ರಾ. ಪಂ. ಅಧ್ಯಕ್ಷರನ್ನು ತೆಗೆದು ಹಾಕುವ ನಿಯಮ ವಾಪಸ್ ಪಡೆಯಲು ಸಿಎಂ ಗೆ ಮನವಿ

: P. Requests CM to withdraw rule of removing president and vice-president
Photo Credit :
ಬೆಂಗಳೂರು: ಕರ್ನಾಟಕ ಸರ್ಕಾರವು ಗ್ರಾಮ ಸ್ವರಾಜ್ ಮತ್ತು ಪಂಚಾಯತ ರಾಜ್ ಕಾಯ್ದೆ ೧೯೯೩ ಪ್ರಕರಣ ೪೩(ಆ),೪೮(೪) ಹಾಗೂ ೪೮(೫)ಕ್ಕೆ ತಿದ್ದುಪಡಿ ತಂದು ಹೊರಡಿಸಿರುವ “ಗ್ರಾಮ ಪಂಚಾಯತಿಯ ಸದಸ್ಯ, ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ತೆಗೆದು ಹಾಕುವ ನಿಯಮಗಳು ೨೦೨೨” ಕರಡು ಅಧಿಸೂಚನೆಯ ವಾಪಸ್ಸು ಪಡೆಯಬೇಕೆಂದು ಆಗ್ರಹಿಸಿ ವಿಧಾನ ಪರಿಷತ್ ಶಾಸಕರುಗಳಾದ ಮಂಜುನಾಥ ಭಂಡಾರಿ, ಎಸ್. ರವಿ, ದಿನೇಶ್ ಗೂಳಿಗೌಡ ಮಂಡ್ಯ, ರಾಜೇಂದ್ರ ರಾಜಣ್ಣ, ಮಧು ಮಾದೇಗೌಡ, ಅನಿಲ್ ಕುಮಾರ್ ಅವರು ಬುಧವಾರ (೨೪-೦೮-೨೦೨೨) ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
“ಪ್ರಸ್ತುತ ಪ್ರಕಟಿಸಿರುವ ಕರಡು ಅಧಿಸೂಚನೆಯಲ್ಲಿ ಪ್ರಕರಣ ೪೩(ಎ) ಅಡಿ ದುರ್ನಡತೆಯ ಬಗ್ಗೆ ವ್ಯಾಖ್ಯಾನಿಸಿದ್ದರೂ ಯಾವುದೇ ರೀತಿಯ ಸ್ಪಷ್ಟತೆ ಇರುವುದಿಲ್ಲ. ನಿಯಮ ೨(ಸಿ)ಯಲ್ಲಿ ತನಿಖಾಧಿಕಾರಿ ಮತ್ತು ವಿಚಾರಾಣಾಧಿಕಾರಿಯ ಬಗ್ಗೆ ಗೊಂದಲವಿದ್ದು, ಯಾವುದೇ ನಿರ್ದಿಷ್ಟತೆ ಇರುವುದಿಲ್ಲ.  ದುರ್ನಡತೆ  ಹೆಸರಿನಲ್ಲಿ ದೂರು ಸ್ವೀಕಾರ, ತನಿಖೆ ಹಾಗೂ ವಿಚಾರಣೆ ಜವಾಬ್ದಾರಿಯನ್ನು ಕೆಳ ಹಂತದ ಅಧಿಕಾರಿಗಳಿಗೆ ನೀಡುವ ಮೂಲಕ ಸರ್ಕಾರ ಗ್ರಾಮ ಪಂಚಾಯತ ಪ್ರತಿನಿಧಿಗಳ ಪ್ರಜಾಸತಾತ್ಮಕ ಹಕ್ಕುಗಳನ್ನು ಅಧಿಕಾರಿಗಳ ಮೂಲಕ ಮೊಟಕುಗೊಳಿಸುವ ಹುನ್ನಾರ ನಡೆಸಿದ್ದಾರೆ. ತನ್ಮೂಲಕ ವಿಕೇಂದ್ರಿಕರಣದ ವಿರುದ್ಧ ಕೇಂದ್ರಿಕೃತ ಆಡಳಿತ ವ್ಯವಸ್ಥೆಯನ್ನು ಸ್ಥಾಪಿಸಲು ಹೊರಟಿದೆ” ಎಂದು ಶಾಸಕರುಗಳು ತಿಳಿಸಿದ್ದಾರೆ.
“ಪ್ರಕರಣ ೪೩(ಎ) ೪೮(೪)(೫) ರ ಅಡಿಯಲ್ಲಿ ದೂರು ಸ್ವೀಕರಿಸುವ ಅಧಿಕಾರ ಕಾಯ್ದೆಯಲ್ಲಿರುವಂತೆ ರಾಜ್ಯ ಸರ್ಕಾರಕ್ಕೆ ಮಾತ್ರ ಇರಬೇಕು ಮತ್ತು ಸದರಿ ದೂರಿನ ಮೇಲೆ ರಾಜ್ಯ ಸರ್ಕಾರವೇ ಕ್ರಮ ಕೈಗೊಳ್ಳಬೇಕು.  ಸರ್ಕಾರದ ಈ ಕರಡು ನಿಯಮದಲ್ಲಿ ಬದಲಾವಣೆ ತರಬೇಕೆಂದು” ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಆಕ್ಷೇಪಣಾ ಮತ್ತು ಸಲಹೆಗಳಲ್ಲಿ ಶಾಸಕರುಗಳು ವಿವರಿಸಿದ್ದಾರೆ.
ಶಾಸಕರ ಅಹವಾಲುಗಳನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು