ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವದಲ್ಲಿ ಈ ಬಾರಿ ಒಂದು ಅಪರೂಪದ ಮತ್ತು ಐತಿಹಾಸಿಕ ಘಟನೆ ನಡೆದಿದೆ. ಕರಗ ಹೊರುವ ಮುಖ್ಯ ಅರ್ಚಕ ಜ್ಞಾನೇಂದ್ರ ಸ್ವಾಮಿ ಅವರಿಗೆ ಶುಭ ಹಾರೈಸಲು ಮುಸ್ಲಿಂ ಸಮುದಾಯದ ಪ್ರಮುಖರು ನೇರವಾಗಿ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ್ದರು.

ದೇವಸ್ಥಾನದ ಆವರಣದಲ್ಲಿ ಜ್ಞಾನೇಂದ್ರ ಅವರಿಗೆ ಹೂವಿನ ಹಾರ ಹಾಕಿ, ಗೌರವ ಸಲ್ಲಿಸಿ, ಕರಗ ಮಹೋತ್ಸವ ಯಶಸ್ವಿಯಾಗಲಿ ಎಂದು ಆಶೀರ್ವದಿಸಿದರು. ಇದು ಕೇವಲ ಒಂದು ಧಾರ್ಮಿಕ ಆಚರಣೆಯಲ್ಲ, ಬದಲಿಗೆ ಬೆಂಗಳೂರಿನ ಕೋಮು ಸೌಹಾರ್ದತೆಯ ಶಕ್ತಿಯನ್ನು ಜಗತ್ತಿಗೆ ಸಾರುವ ವಿಶಿಷ್ಟ ಸಂದೇಶವಾಗಿದೆ. ಜಾತಿ-ಮತದ ಬೇಲಿಗಳನ್ನು ಮೀರಿ ನಡೆದ ಈ ಸೌಹಾರ್ದತೆಯ ದೃಶ್ಯ ಈಗ ಎಲ್ಲೆಡೆ ವೈರಲ್ ಆಗುತ್ತಿದೆ.

View this post on Instagram

A post shared by News Karnataka (@newskarnataka)