ಬೆಂಗಳೂರು: ಮೂಲಕ ಕನ್ನಡ ನಾಮಫಲಕ ಹಾಕದವರಿಗೆ ಬಿಬಿಎಂಪಿ ಶಾಕ್ ನೀಡಿದ್ದು, ಕನ್ನಡ ನಾಮಫಲಕ ಹಾಕದವರ ಟ್ರೇಡ್ ಲೈಸೆನ್ಸ್ ರದ್ದು ಮಾಡಿದೆ.
ಮಾಲ್ ಆಫ್ ಏಷ್ಯಾದ ಕೆಲವು ಮಳಿಗೆಗಳಿಗೆ ಬೀಗ ಹಾಕಲಾಗಿದೆ. ಕಾಲಾವಕಾಶ ನೀಡಿದರೂ ಉದ್ದಿಮೆದಾರರು ಕ್ಯಾರೆ ಎನ್ನದ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕರಿಗೆ ಪಾಲಿಕೆ ಬಿಸಿ ಮುಟ್ಟಿಸಿದೆ.
ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಇರಬೇಕು ಅಂತ ನೀಡಿದ್ದ 2 ತಿಂಗಳ ಗಡುವು ಮುಗಿದು ಹೋಗಿದೆ. ಶೇ.60ರಷ್ಟು ಕನ್ನಡರಷ್ಟು ಕನ್ನಡವಿರದ ನಾಮಫಲಕಗಳನ್ನ ಹಾಕಿದವರ ವಿರುದ್ಧ ಇತ್ತೀಚೆಗೆ ರಾಜ್ಯಾದ್ಯಂತ ಎಲ್ಲ ನಗರಗಳಲ್ಲೂ ಕ್ರಮಕೈಗೊಳ್ಳಬೇಕಿತ್ತು.
ಕನ್ನಡ ನಾಮಫಲಕ ಅಳವಡಿಸದವರಿಗೆ ಬಿಬಿಎಂಪಿ ಈ ಹಿಂದೆ ಶಾಕ್ ನೀಡಿತ್ತು. ಶೇ. 60ರಷ್ಟು ಕನ್ನಡ ನಾಮಫಲಕ ಅಳವಡಿಸದಿದ್ದರೆ ಲೈಸೆನ್ಸ್ ರದ್ದು ಮಾಡುವ ಎಚ್ಚರಿಕೆ ನೀಡಿತ್ತು. ಈ ಸಂಬಂಧ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ವಿಕಾಸ್ ಕಿಶೋರ್ ಆದೇಶ ಹೊರಡಿಸಿದ್ದರು. ಅಂಗಡಿ ಲೈಸೆನ್ಸ್ ರದ್ದು ಮಾಡಿ ಬೀಗ ಹಾಕುವುದಾಗಿ ಬಿಬಿಎಂಪಿ ಎಚ್ಚರಿಕೆ ನೀಡಿತ್ತು.
ಈ ಬಗ್ಗೆ ಕನ್ನಡ ಚಳವಳಿ ವಾಟಾಳ್ ನಾಗರಾಜ್ ಅನ್ಯ ಭಾಷೆಯ ನಾಮಫಲಕಗಳನ್ನ ಕಿತ್ತು ಹಾಕುವುದಾಗಿ ಗುಡುಗಿದರೆ, ಕರವೇ ಅಧ್ಯಕ್ಷ ನಾರಾಯಣಗೌಡರು ಮಾರ್ಚ್ 5ರಂದು ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದರು.