ಬೆಂಗಳೂರು: ಕೆಪಿಸಿಸಿ ಬೆಂಗಳೂರು ಸಮಿತಿಗೆ 50 ಸಾವಿರ ದಂಡ ಕಟ್ಟುವಂತೆ ಬಿಬಿಎಂಪಿ ನೋಟಿಸ್ ನೀಡಿದೆ. ಕಚೇರಿ ಮುಂಭಾಗದಲ್ಲಿ ರಾಜಿವ್ ಗಾಂಧಿ, ಡಿ ದೇವರಾಜ್ ಜನ್ಮದಿನಾಚರಣೆ ಅಂಗವಾಗಿ ಫ್ಲೆಕ್ಸ್ ಅಳವಡಿಸಲಾಗಿತ್ತು.
ಪಾಲಿಕೆ ಆದೇಶವಿದ್ದರೂ ತೆರವು ಮಾಡದ ಹಿನ್ನೆಲೆ ಕೆಪಿಸಿಸಿ ಬೆಂಗಳೂರು ಸಮಿತಿಗೆ ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ 50 ಸಾವಿರ ದಂಡ ವಿಧಿಸಿದ್ದಾರೆ.
ವಸಂತನಗರ ವ್ಯಾಪ್ತಿಗೆ ಬರುವ ಕ್ವೀನ್ಸ್ ರಸ್ತೆಯ ಮಿಲ್ಲರ್ ಟ್ಯಾಂಕ್ ಬೆಡ್ ಏರಿಯಾದಲ್ಲಿ ಅಂದ್ರೆ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಅನಧಿಕೃತವಾಗಿ ಬ್ಯಾನರ್ಸ್ ಅಳವಡಿಸಲಾಗಿತ್ತು.
ಈ ಬ್ಯಾನರ್ ಅಳವಡಿಸಲು ಕೆಪಿಸಿಸಿ ಯಾವುದೇ ಅನುಮತಿಯನ್ನು ಪಡೆದುಕೊಂಡಿರಲಿಲ್ಲ ಎಂದು ಬಿಬಿಎಂಪಿ ತನ್ನ ಆದೇಶದಲ್ಲಿ ತಿಳಿಸಿದೆ. ಪಾಲಿಕೆಯ ಮಾನ್ಯ ಮುಖ್ಯ ಆಯುಕ್ತರವ ಖಾತೆಗೆ ದಂಡದ ಹಣ ಪಾವತಿಸುವಂತೆ ಬಿಬಿಎಂಪಿ ಸೂಚಿಸಿದೆ.
ಕೆಪಿಸಿಸಿ ಬೆಂಗಳೂರು ಸಮಿತಿಗೆ ದಂಡ ಹಾಕಿರುವ ವಿಚಾರದ ಕುರಿತು ಬಿಬಿಎಂಪಿ ಚೀಫ್ ಕಮಿಷನರ್ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿದ್ದಾರೆ. ಎಲ್ಲಾ ವಲಯ ಆಯುಕ್ತರಿಗೆ ಅನಧಿಕೃತ ಫ್ಲೆಕ್ಸ್ ವಿಚಾರವಾಗಿ ಕ್ರಮಕೈಗೊಳ್ಳಲು ಸೂಚನೆ ಕೊಟ್ಟಿದ್ದೆ ಎಂದು ಹೇಳಿದ್ದಾರೆ.
ಇಂದು ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ಗೆದ್ದು…
ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…
ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ದಾಖಲಾಗಿದೆ.ಶಾಸಕರು ತನ್ನ…
ಕಾರು ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್ ಮಾಡಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಬ್ಯಾಂಕ್ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.