ಬೆಂಗಳೂರು: ವಿಧಾನ ಸಭೆ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು ಮೇ 10ರ ಬೆಳಗ್ಗೆ 7ರಿಂದ ಮತದಾನ ಆರಂಭವಾಗಲಿದೆ. ಆದರೆ ಚುನಾವಣಾ ಕರ್ತವ್ಯಕ್ಕೆ ಕೆಎಸ್ ಆರ್ಟಿಸಿ ಬಸ್ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಿರುವ ಕಾರಣ ಮತದಾನಕ್ಕಾಗಿ ಊರಿಗೆ ತೆರಳುವವರಿಗೆ ಸಮಸ್ಯೆಯಾಗಿದೆ.
ಮೆಜಸ್ಟಿಕ್ನಿಂದ ಹಲವು ಊರುಗಳಿಗೆ ಬಸ್ ಗಳ ಕೊರತೆ ಕಾಡುತ್ತಿದೆ. ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ಚರ್ಚೆ ಮಾಡ್ತೀವಿ, ಸಮಸ್ಯೆ ಬಗೆಹರಿಸುತ್ತೀವಿ ಎಂದು ಜಾರಿ ಕೊಳ್ಳುತ್ತಿದ್ದಾರೆ. ಮತದಾನ ಹೆಚ್ಚಿಸಲು ರಜೆ ಘೋಷಿಸಿಯೂ ಪ್ರಯೋಜನವಿಲ್ಲದಂತಾಗಿದೆ. ಮತ ಹಾಕಬೇಕು ಎಂದು ತಮ್ಮ ತಮ್ಮ ಊರಿಗೆ ಹೋಗುವವರು ಅವ್ಯವಸ್ಥೆಯ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಚುನಾವಣಾ ಕರ್ತವ್ಯಕ್ಕೆ 3,500 ಕೆಎಸ್ಆರ್ಟಿಸಿ ಬಸ್ಗಳನ್ನು ನೀಡಲಾಗಿದ್ದು ಬಸ್ಗಳ ಸಂಖ್ಯೆ ಕಡಿಮೆಯಾಗಿದೆ. ಈ ಹಿನ್ನೆಲೆ ಮತದಾನ ಚಲಾಯಿಸಲು ತಮ್ಮ ತಮ್ಮ ಊರಿಗೆ ಹೊರಟಿರುವ ಮಂದಿ ಸಮಸ್ಯೆಗೆ ಸಿಲುಕಿದ್ದಾರೆ. ಮೆಜೆಸ್ಟಿಕ್ ಬರುವ ಪ್ರತಿ ಸಾರಿಗೆ ಬಸ್ ಫುಲ್ ರಶ್ ಆಗಿದೆ. ದೂರದೂರಿನಿಂದ ಪ್ರಯಾಣಿಸುವವರು ಕೂಡ ಬಸ್ನಲ್ಲಿ ಇಕ್ಕಟ್ಟಿನ ಪರಿಸ್ಥಿತಿಯಲ್ಲಿ ಪ್ರಯಾಣಿಸುವಂತಾಗಿದೆ.