News Karnataka Kannada
Thursday, May 02 2024
ಬೆಂಗಳೂರು

ಬೆಂಗಳೂರು: ದಲಿತ ವಿರೋಧಿ ಸಿದ್ದರಾಮಯ್ಯ ನೀವು ಹೇಗೆ ವೋಟ್‌ ಕೇಳುತ್ತೀರಿ, ಬಿಜೆಪಿ ಟ್ವೀಟ್‌ ಪ್ರಶ್ನೆ

BJP to stage series of protests over failure to implement guarantee scheme
Photo Credit : News Kannada

ಬೆಂಗಳೂರು: ಸಿದ್ದರಾಮಯ್ಯ ನವರೇ ದಲಿತ ನಾಯಕರನ್ನು ಸೋಲಿಸಿದ ನೀವು ಚುನಾವಣೆಯಲ್ಲಿ ಯಾವ ಮುಖವಿಟ್ಟುಕೊಂಡು ವೋಟ್‌ ಕೇಳುತ್ತೀರಿ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ದಲಿತರ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್‌ಗೆ ದಲಿತರ ನೆನಪಾಗಿದೆ.

ದಲಿತರು ಈ ಬಾರಿ ನಿಮ್ಮನ್ನು ಸೋಲಿಸುತ್ತಾರೆ ಎಂಬ ಸಮೀಕ್ಷೆ ಆಧರಿಸಿ ಕೋಲಾರ ಬಿಟ್ಟು ಓಡಿದ ಸಿದ್ದರಾಮಯ್ಯ ಅವರೇ ದಲಿತ ನಾಯಕರನ್ನು ಸೋಲಿಸಿದ ನೀವು ಯಾವ ಮುಖವಿಟ್ಟುಕೊಂಡು ಓಟು ಕೇಳುತ್ತೀರಿ ಎಂದು ಪ್ರಶ್ನಿಸಿದೆ.

ದಲಿತ ವಿರೋಧಿ ಕಾಂಗ್ರೆಸ್‌ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರನ್ನು ಕುತಂತ್ರದಿಂದ ಸೋಲಿಸಿ ಅವರ ಶವಸಂಸ್ಕಾರಕ್ಕೂ ಜಾಗ ನೀಡಿರಲಿಲ್ಲ. ಅಂಬೇಡ್ಕರ್‌ ಅವರಿಗೆ ಸಂಬಂಧಿಸಿದ ಐದು ಸ್ಥಳಗಳನ್ನು ಗುರುತಿಸಿದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಪಂಚತೀರ್ಥ ಯೋಜನೆ ಮೂಲಕ ಅಭಿವೃದ್ಧಿಗೊಳಿಸಿದೆ ಎಂದು ಟ್ವೀಟ್‌ ಮಾಡಿದೆ.

ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ದಲಿತ ನಾಯಕ ಜಿ. ಪರಮೇಶ್ವರ, ಮಲ್ಲಿಕಾರ್ಜುನ ಖರ್ಗೆ, ಶ್ರೀನಿವಾಸ ಪ್ರಸಾದ್‌, ಮುನಿಯಪ್ಪ ಅವರನ್ನು ಮೂಲೆಗುಂಪು ಮಾಡಿತ್ತು. ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ದಾಳಿ ನಡೆದಾಗಲೂ ತುಷ್ಟೀಕರಣದ ಕಾರಣದಿಂದ ಅವರನ್ನು ಬೆಂಬಲಿಸಲಿಲ್ಲ ಎಂದು ಟ್ವೀಟ್‌ನಲ್ಲಿ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು