ಬೆಂಗಳೂರು: ವಿಧಾನಸಭೆ ಚುನಾವಣೆ ಕುರಿತಂತೆ ಬಿಜೆಪಿ ಮತ್ತು ಜೆಡಿಎಸ್ ಒಪ್ಪಂದ ಮಾಡಿಕೊಂಡಿವೆ ಎಂದು ಹಾಸನ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಜೆ.ಗೌಡ ಹೇಳಿದ್ದಾರೆ. ನೀವು ಜೆಡಿಎಸ್ ಗೆ ಮತ ಹಾಕಿದರೆ ಅದು ಬಿಜೆಪಿಗೆ ಮತ ಹಾಕಿದಂತೆ ಎಂದು ಹಾಸನದಲ್ಲಿ ಹೇಳಿದ್ದಾರೆ. ಆದ್ದರಿಂದ ನಿಮ್ಮ ಮತವನ್ನು ಜೆಡಿಎಸ್ ಗೆ ವ್ಯರ್ಥ ಮಾಡಬೇಡಿ’ ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಯಾವುದೇ ಹೊಂದಾಣಿಕೆಯ ರಾಜಕೀಯ ಇಲ್ಲ ಎಂಬ ಬಿಜೆಪಿ ರಾಷ್ಟ್ರೀಯ ನಾಯಕ ಹೇಳಿಕೆಗಳ ಮಧ್ಯೆ ಶಾಸಕ ಪ್ರೀತಂ ಹೇಳಿಕೆ ಮಹತ್ವ ಪಡೆದಿದೆ.