ಬೆಂಗಳೂರು: ಕೂಡ್ಲಿಗಿಯ ಬಿಜೆಪಿ ಶಾಸಕ ಎನ್. ವೈ. ಗೋಪಾಲಕೃಷ್ಣ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಶಿರಸಿಯಲ್ಲಿ ಶುಕ್ರವಾರ ರಾಜೀನಾಮೆ ಪತ್ರ ಸಲ್ಲಿಸಿದರು.
ಗೋಪಾಲಕೃಷ್ಣ ಮೂಲತಃ ಕಾಂಗ್ರೆಸ್ ಪಕ್ಷದವರು. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ನಾಲ್ಕು ಬಾರಿ ಆಯ್ಕೆಯಾಗಿದ್ದರು. 2018 ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸೀಟು ದೊರೆಯದ ಕಾರಣ ಬಿಜೆಪಿಯಿಂದ ಟಿಕೇಟ್ ಪಡೆದು ಕೂಡ್ಲಿಗಿ ವಿಧಾಸಭೆ ಕ್ಷೇತ್ರದಿಂದ ಜಯಗಳಿಸಿದ್ದರು.