ಬೆಂಗಳೂರು: ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ವಿಶ್ವೇಶ್ವರಯ್ಯ ಜನ್ಮಸ್ಥಳವಾಗಿದೆ. ಇಂತಹ ಪುಣ್ಯಭೂಮಿಗೆ ಬಂದಿದ್ದು ನನ್ನ ಸೌಭಾಗ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಚಿಕ್ಕಾಬಳ್ಳಾಪುರ ಸತ್ಯಸಾಯಿ ಗ್ರಾಮದಲ್ಲಿ ನಿರ್ಮಿಸಿರುವ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕಾಲೇಜು, ಸತ್ಯಸಾಯಿ ರಾಜೇಶ್ವರಿ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸತ್ಯಸಾಯಿ ಆಶ್ರಮದಿಂದ ಶೈಕ್ಷಣಿಕ, ಸಾಮಾಜಿಕ, ವೈದ್ಯಕೀಯ ಸೇವೆ ನಡೆಯುತ್ತಿದೆ. 2014ಕ್ಕಿಂತ ಮೊದಲು 300ಕ್ಕಿಂತ ಕಡಿಮೆ ಮೆಡಿಕಲ್ ಕಾಲೇಜುಗಳಿದ್ದವು ಇಂದು ದೇಶದಲ್ಲಿ 650ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳಿವೆ. ಕರ್ನಾಟಕದಲ್ಲೇ ಸುಮಾರು 70ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳು ಇವೆ. ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕ ಅಭಿವೃದ್ಧಿ ಆಗುತ್ತಿದೆ.
ಬಡವರ ಅಭಿವೃದ್ಧಿಯೇ ಬಿಜೆಪಿಯ ಗುರಿಯಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಿಂದ ಬಡ ರೋಗಿಗಳಿಗೆ ಅನುಕೂಲವಾಗಿದೆ ಎಂದರು. ಜತೆಗೆ, ಸಿಎಂ ಬೊಮ್ಮಾಯಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು. ಆರೋಗ್ಯದ ಜೊತೆಗೆ ಮಹಿಳೆಯರ ಕಲ್ಯಾಣ ನಮ್ಮ ಸರ್ಕಾರದ ಗುರಿ. ಗ್ರಾಮಗಳಲ್ಲಿ ಮಹಿಳಾ ಸಂಘಗಳ ಮೂಲಕ ಮಹಿಳೆಯರ ಸಶಕ್ತೀಕರಣವಾಗುತ್ತಿದೆ ಎಂದು ಮೋದಿ ಹೇಳಿದರು. ಅಲ್ಲದೆ, ಸಾಯಿಬಾಬಾ ಜೊತೆ ನನಗೆ ನಿಕಟ ಸಂಬಂಧ ಇತ್ತು ಎಂದರು.