News Karnataka Kannada
Sunday, April 28 2024
ಬೆಂಗಳೂರು

ಬೆಂಗಳೂರು: ವರಿಷ್ಠರನ್ನು ಭೇಟಿಯಾದ ಬಿವೈ ವಿಜಯೇಂದ್ರ

Bengaluru: BY Vijayendra meets top brass
Photo Credit : Twitter

ಬೆಂಗಳೂರು: ಬಿಜೆಪಿ ಕರ್ನಾಟಕ ಘಟಕದ ನೂತನ ಅಧ್ಯಕ್ಷ ಬಿವೈ ವಿಜಯೇಂದ್ರ ಅವರು ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಎಸ್​​ಎಂ ಕೃಷ್ಣ ಮತ್ತು ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ  ಸೌಜನ್ಯಯುತ ಭೇಟಿ ನೀಡಿದ್ದಾರೆ.

ಇದೇ ವೇಳೆ ದೇವೇಗೌಡರು  ಬಿಜೆಪಿ ಮತ್ತು ಜೆಡಿಎಸ್‌ ಒಟ್ಟಾಗಿ ಸ್ಪರ್ಧಿಸಬೇಕು ಎಂದು  ವಿಜಯೇಂದ್ರಗೆ ಕಿವಿ ಮಾತು ಹೇಳಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್‌ ಒಟ್ಟಾಗಿ ಸ್ಪರ್ಧಿಸಬೇಕು ಎಂದು ಜೆಡಿಎಸ್‌ ವರಿಷ್ಠ ಹೆಚ್‌ಡಿ ದೇವೇಗೌಡ  ಅವರು ಸೋಮವಾರ ಬಿಜೆಪಿ ಕರ್ನಾಟಕ ಘಟಕದ ನೂತನ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ಬಳಿ ಹೇಳಿದ್ದಾರೆ.

ಪದ್ಮನಾಭನಗರದ ನಿವಾಸದಲ್ಲಿ ದೇವೇಗೌಡರನ್ನು ಭೇಟಿ ಮಾಡಿದ ವಿಜಯೇಂದ್ರ ಅವರ ಪಾದ ಮುಟ್ಟಿ ಆಶೀರ್ವಾದ ಪಡೆದು, ಶಾಲು ಹೊದಿಸಿ, ಹಾರ ಹಾಕಿ, ಪುಷ್ಪಗುಚ್ಛ ಅರ್ಪಿಸಿ ಗೌರವಿಸಿದ್ದಾರೆ.

ನವೆಂಬರ್ 10 ರಂದು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಆಯ್ಕೆಯಾದ ವಿಜಯೇಂದ್ರ ಅವರು , ನವೆಂಬರ್ 15 ರಂದು ಔಪಚಾರಿಕವಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಹೆಚ್​ಡಿ ದೇವೇಗೌಡ ಅವರನ್ನು ಭೇಟಿಯಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಪ್ರಧಾನಿ ನರೇಂದ್ರ ಮೋದಿ ಮಹತ್ವದ ಜವಾಬ್ದಾರಿ ನೀಡಿರುವುದು ಸಂತಸ ತಂದಿದೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಂತೆ ರಾಜ್ಯಾದ್ಯಂತ ಪ್ರವಾಸ ಮಾಡಬೇಕು ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು