ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ, ಚಿಕ್ಕಮಗಳೂರಿನ ಶಾಸಕ ಸಿ.ಟಿ.ರವಿ ಅವರನ್ನು ಪಕ್ಷದ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ನೇಮಕ ಮಾಡುವ ಸಾಧ್ಯತೆಯಿದೆ.
ಆರ್ ಎಸ್ ಎಸ್ ಮೂಲಗಳ ಪ್ರಕಾರ, ಬಿಜೆಪಿ ರಾಷ್ಟ್ರೀಯ ನಾಯಕತ್ವವು ನಳಿನ್ ಕುಮಾರ್ ಕಟೀಲ್ ಅವರಿಗೆ ಆಗಸ್ಟ್ 20 ರ ನಂತರ ಯಾವುದೇ ವಿಸ್ತರಣೆ ನೀಡುವುದಿಲ್ಲ ಎಂದು ತಿಳಿಸಿದೆ.
ಸಾರ್ವಜನಿಕ ವೇದಿಕೆಗಳಲ್ಲಿ ಪಕ್ಷವನ್ನು ಬಲವಾಗಿ ರಕ್ಷಿಸಬಲ್ಲ ಲಿಂಗಾಯತೇತರ ನಾಯಕನನ್ನು ಪಕ್ಷ ಹುಡುಕುತ್ತಿದೆ.
ರವಿ ಅವರನ್ನು ರಾಷ್ಟ್ರೀಯ ಕರ್ತವ್ಯಗಳಿಂದ ಮುಕ್ತಗೊಳಿಸಿ ರಾಜ್ಯಕ್ಕೆ ವಾಪಸ್ ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ನಳಿನ್ ಕುಮಾರ್ ಕಟೀಲ್ ಅವರ ಸ್ಥಾನಕ್ಕೆ ಶೀಘ್ರದಲ್ಲೇ ಹೊಸ ನಾಯಕನನ್ನು ನೇಮಿಸಲಾಗುವುದು ಎಂದು ಬುಧವಾರ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೇ ಖಚಿತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.