ಬೆಂಗಳೂರು: ನಾಯಿಬೊಗಳಿದ್ದಕ್ಕೆ ಮೂವರು ವ್ಯಕ್ತಿಗಳು ಮರದ ಬೆತ್ತಗಳಿಂದ ಥಳಿಸಿ ನಾಯಿಯ ಮೇಲೆ ದೌರ್ಜನ್ಯವೆಸಗಿರುವ ವಿಡಿಯೋ ವೈರಲ್ ಆಗಿದ್ದು, ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆಯ ವಿಡಿಯೋ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೂವರು ವ್ಯಕ್ತಿಗಳು ತಮ್ಮ ನಾಯಿಯನ್ನು ಹೊಡೆದಿದ್ದಾರೆ ಎಂದು ಆರೋಪಿಸಿ ಸಾಕುಪ್ರಾಣಿ ಮಾಲೀಕ ಗಿರಿಗಪ್ಪ ಪೊಲೀಸ್ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ರಾಹುಲ್,ರೋಹಿತ್ ಮತ್ತು ರಜತ್ ಮೂವರನ್ನು ಹೆಸರಿಸಿದ್ದಾರೆ.
ಭಟ್ಟರಹಳ್ಳಿ ಸಮೀಪದ ಮಂಜುನಾಥ್ ಲೇಔಟ್ನಲ್ಲಿರುವ ಗಿರಿಗಪ್ಪ ಎಂಬುವವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ದಾಖಲಾಗಿದೆ.
ನಾಯಿಗೆ ಥಳಿಸಿದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸಾಕು ಮಾಲೀಕರು ನಾಯಿಯನ್ನು ಪಶುವೈದ್ಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಮೂವರು ನಾಯಿಯನ್ನು ಹೊಡೆಯಲು ಕೋಲುಗಳನ್ನು ಬಳಸುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ, ಮಧ್ಯಪ್ರವೇಶಿಸಲು ಪ್ರಯತ್ನಿಸಿದವರ ಮೇಲೆ ಕೂಗಾಡಿದ್ದಾರೆ. ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ 1960ರ ಅಡಿಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.