News Karnataka Kannada
Tuesday, May 07 2024
ಬೆಂಗಳೂರು

ಬೆಂಗಳೂರು: ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

The government has cleared a file that has not been completed even after the expiry of its term
Photo Credit : Wikimedia

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಿದ್ಧರಾಮಯ್ಯ ಅವರ ಕಾಲದಲ್ಲಿ 32 ಸರಣಿ ಕೊಲೆಗಳಾಗಿದ್ದವು. ಆಗ ಅವರು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಎಲ್ಲಾ ವಿಷಯಗಳಲ್ಲಿ ರಾಜಕಾರಣವನ್ನು ಮಾಡಬಾರದು. ಅವರ ಹೇಳಿಕೆಗೆ ಹೆಚ್ಚಿನ ಮಹತ್ವವಿಲ್ಲ ಎಂದರು.

ಶಾಸಕ ತನ್ವೀರ್ ಸೇಠ್ ಮೇಲೆ ಎಸ್‍ಡಿಪಿಐ ಹಾಗೂ ಪಿಎಫ್‍ಐ ಸಂಘಟನೆಯ ಸುಮಾರು 200 ಜನರನ್ನು ದಾಳಿ ನಡೆಸಿದ ಪ್ರಕರಣದಿಂದ ಅವರನ್ನು ಮುಕ್ತಗೊಳಿಸಲಾಗಿತ್ತು. ಅವರು ಈಗ ಪುನ: ಸಮಾಜಘಾತುಕ ಕೃತ್ಯಗಳನ್ನು ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಕೇವಲ ಹೇಳಿಕೆಗಳನ್ನು ನೀಡುತ್ತಾರೆ ಎಂದರು.

ಸರ್ಕಾರ ಕ್ಷಿಪ್ರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಸರ್ಕಾರ ತೆಗೆದುಕೊಂಡಿರುವ ಕ್ರಮಗಳು ಜನರ ಮುಂದಿವೆ. ಎಸ್‍ಡಿಪಿಐ, ಪಿಎಫ್‍ಐ ಸಂಘಟನೆಗಳಿಗೆ ಫಂಡಿಂಗ್ ಮಾಡುತ್ತಿರುವುದೇ ಬಿಜೆಪಿ ಪಕ್ಷ ಎಂಬುದು ಅತ್ಯಂತ ಹಾಸ್ಯಾಸ್ಪದವಾದ ಹೇಳಿಕೆ. ಇದು ಕಾಂಗ್ರೆಸ್ಸಿನ ರಾಜಕೀಯ ದಿವಾಳಿತನವನ್ನು ಬಿಂಬಿಸುತ್ತದೆ. ಸರ್ಕಾರದಲ್ಲಿ ಯಾರೂ ರಾಜಿನಾಮೆ ಕೊಡುವ ಅಗತ್ಯವಿಲ್ಲ. ಇಂತಹ ಸಂದರ್ಭದಲ್ಲಿ ಕರ್ತವ್ಯದಿಂದ ವಿಮುಖರಾಗುವುದಿಲ್ಲ. ಗಟ್ಟಿಯಾಗಿ ನಿಂತು ಕಠಿಣ ನಿಲುವುಗಳನ್ನು ತೆಗೆದುಕೊಂಡು ಕೆಲಸ ಮಾಡಲಾಗುತ್ತಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು