ಬೆಂಗಳೂರು: ಕಾಂಗ್ರೆಸ್‌ನಿಂದ ಮತ್ತೊಂದು ಗ್ಯಾರಂಟಿ, ಪ್ರತಿ ತಾಲೂಕಿನಲ್ಲಿ ತಾಯಿ-ಮಗು ಆಸ್ಪತ್ರೆ

ಬೆಂಗಳೂರು: ಕಾಂಗ್ರೆಸ್‌ ಹಲವು ಗ್ಯಾರಂಟಿಗಳನ್ನು ಈಗಾಗಲೇ ಘೋಷಿಸಿದ್ದು ಹೊಸದಾಗಿ ಪ್ರತಿ ತಾಲೂಕಿನಲ್ಲಿ ತಾಯಿ- ಮಗು ಆಸ್ಪತ್ರೆ ನಿರ್ಮಿಸುವುದಾಗಿ ಘೋಷಿಸಿದ್ದಾರೆ.

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ , ಹೆಣ್ಣುಮಕ್ಕಳಿಗಾಗಿ ಪ್ರತಿ ತಾಲೂಕಿನಲ್ಲೂ ತಾಯಿ-ಮಗು ಆಸ್ಪತ್ರೆಯನ್ನ ಹೊಸದಾಗಿ ನಿರ್ಮಿಸಿ, ಉಚಿತವಾಗಿ ಹೆರಿಗೆ ಸೌಲಭ್ಯ ಸಿಗುವಂತೆ ಮಾಡುತ್ತೇವೆ. ಎಲ್ಲರನ್ನೂ ಸಮಾನತೆಯಿಂದ ನೋಡುತ್ತೇವೆ. ಮಕ್ಕಳಿಗೆ ಗ್ರಾಮೀಣ ಭಾಗದಲ್ಲೇ ಉತ್ತಮ ಶಿಕ್ಷಣ ವ್ಯವಸ್ಥೆ ಕಲ್ಪಿಸಿ, ಬೆಂಗಳೂರಿನಂತಹ ನಗರಗಳಿಗೆ ಬರುವುದನ್ನು ತಪ್ಪಿಸುತ್ತೇವೆ ಎಂದು ಹೇಳಿದ್ದಾರೆ.

ಬೆದರಿಕೆಗೆ ಬಗ್ಗಲ್ಲ: `ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೆ ಕೇಂದ್ರದ ಯೋಜನೆಗಳಿಗೆ ಬ್ರೇಕ್’ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಮಿಸ್ಟರ್ ನಡ್ಡಾಜಿ, ಡೋಂಟ್ ತ್ರೆಟನ್ ಅಸ್, ಏನ್ ಹೆದರಿಸ್ತೀರಾ? ಕೇಂದ್ರದ ಯೋಜನೆಗಳನ್ನು ನಿಲ್ಲಿಸ್ತೇವೆ ಅಂತ ಹೆದರಿಸ್ತೀರಾ? ಇಂತಹ ಬ್ಲ್ಯಾಕ್‌ಮೇಲ್‌ಗೆ ಹೆದರಲ್ಲ. ನಿಮ್ಮ ಶಾಸಕರು ಸಂಸದರು ಮಕ್ಕಳ ತರಹ ಸುಮ್ಮನಿರಬಹುದು. ಕಾಂಗ್ರೆಸ್ ನಾಯಕರು ನಿಮ್ಮ ಬೆದರಿಕೆಗೆ ಹೆದರೋದಿಲ್ಲ. ನಿಮ್ಮ ಪ್ರಧಾನಿಯನ್ನ ಬೀದಿ ಬೀದಿ ಅಲೆಯೋ ತರಹ ಮಾಡಿರೋದು ನೀವು ಎಂದು ತಿರುಗೇಟು ನೀಡಿದ್ದಾರೆ.

Ashika S

Recent Posts

ಜಾತಿ ನಿಂದನೆ ಕೇಸ್ ಹೆದರಿದ ಯುವಕ ಆತ್ಮಹತ್ಯೆಗೆ ಶರಣು

ಜಾತಿ ನಿಂದನೆ ಕೇಸ್‌ ದಾಖಲಿಸಿದ್ದಕ್ಕೆ ಹೆದರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ…

11 mins ago

ಚಾರ್ಜ್​ಗೆ ಇಟ್ಟ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ: ಹತ್ತಿರದ ಶಾಮಿಯಾನ‌ ಅಂಗಡಿ ಸುಟ್ಟು ಭಸ್ಮ

ಚಾರ್ಜ್​ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟಗೊಂಡ ಘಟನೆ ಮಂಡ್ಯದ ಮಳವಳ್ಳಿ ಪಟ್ಟಣದ NES ಬಡಾವಣೆಯಲ್ಲಿ ನಡೆದಿದೆ.

26 mins ago

ದನದ ಮಾಂಸ ರಫ್ತಿನಲ್ಲಿ ಬಿಜೆಪಿ 2ನೇ ಸ್ಥಾನ: ಸಂತೋಷ್‌ ಲಾಡ್‌

ಬಿಜೆಪಿ ಸರಕಾರದ ಸಾಧನೆ ಕೇವಲ ಎರಡೇ ಎರಡು. ಒಂದು ದನದ ಮಾಂಸ ರಫ್ತಿನಲ್ಲಿ 2ನೇ ಸ್ಥಾನ. ಎರಡು ಮೋದಿ ಸ್ವಜಾಹೀರಾತಿಗಾಗಿ…

37 mins ago

ಚಾಮರಾಜನಗರ: ಸಾರಿಗೆ ಬಸ್‌ ತಡೆದು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಳಗ್ಗೆ ಕಾಲೇಜುಗಳಿಗೆ ತೆರಳಲು ಸಮರ್ಪಕ ಬಸ್ ಸೌಕರ್ಯವಿಲ್ಲ ಎಂದು ಆರೋಪಿಸಿ ಕಾಲೇಜು ವಿದ್ಯಾರ್ಥಿಗಳು ಕೆ.ಎಸ್. ಆರ್. ಟಿ ಸಿ ಬಸ್…

50 mins ago

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿ ಹೃದಯಾಘಾತದಿಂದ ಮೃತ್ಯು

ಪುಣೆಯಿಂದ ಕುಂದಾಪುರಕ್ಕೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಿನ್ನೆ ಹೊನ್ನಾವರದಲ್ಲಿ ನಡೆದಿದೆ.

1 hour ago

ನೇಹಾ ಹಿರೇಮಠ ನಿವಾಸಕ್ಕೆ ಭೇಟಿ ನೀಡಿದ ಶ್ರೀರಂಭಾಪುರಿ ಜಗದ್ಗುರು

ನೇಹಾ ಹಿರೇಮಠ ನಿವಾಸಕ್ಕೆ ಭೇಟಿ ನೀಡಿದ ಶ್ರೀರಂಭಾಪುರಿ ಜಗದ್ಗುರುಗಳು ಹಿರೇಮಠದ ದಂಪತಿಗೆ ಸಾಂತ್ವನ ಹೇಳಿದರು.

1 hour ago