ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಸ್ತುತ ಕರ್ನಾಟಕ ಕಾಲಿರಿಸಿರುವ ಭಾರತ್ ಜೋಡೋ ಯಾತ್ರೆಗೆ ಅಕ್ಟೋಬರ್ 17ರಂದು ವಿರಾಮ ಸಿಗಲಿದೆ.
ಮೆರವಣಿಗೆಯಲ್ಲಿ ಭಾಗವಹಿಸುವ ಸುಮಾರು 40 ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರತಿನಿಧಿಗಳಿಗಾಗಿ, ಶಿಬಿರದ ಸ್ಥಳದಲ್ಲಿಯೇ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು, ಅಲ್ಲಿ ರಾಹುಲ್ ಗಾಂಧಿ ಸೇರಿದಂತೆ ಎಲ್ಲಾ ಅರ್ಹರು ತಮ್ಮ ಮತಗಳನ್ನು ಚಲಾಯಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಮತದಾರರಿಗೆ ತಮ್ಮ ಹಕ್ಕನ್ನು ಚಲಾಯಿಸಲು ಗುರುತಿನ ಚೀಟಿಯ ಅಗತ್ಯವಿದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಪಕ್ಷದ ಹಿರಿಯ ನಾಯಕ ಮಧುಸೂದನ್ ಮಿಸ್ತ್ರಿ ನೇತೃತ್ವದ ಕೇಂದ್ರ ಚುನಾವಣಾ ಪ್ರಾಧಿಕಾರವು ಚುನಾವಣಾ ಪ್ರಕ್ರಿಯೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲಿದ್ದು, ಈ ಅಧಿಸೂಚನೆಯನ್ನು ಸೆಪ್ಟೆಂಬರ್ 22 ರಂದು ಹೊರಡಿಸಲಾಗಿದೆ.
ನಾಮಪತ್ರಗಳನ್ನು ಹಿಂಪಡೆಯಲು ಅಕ್ಟೋಬರ್ ೮ ಕೊನೆಯ ದಿನಾಂಕವಾಗಿದ್ದು, ಅಕ್ಟೋಬರ್ ೧೯ ರಂದು ಫಲಿತಾಂಶ ಪ್ರಕಟವಾಗಲಿದೆ.
ಇಬ್ಬರು ಅಭ್ಯರ್ಥಿಗಳು ಸ್ಪರ್ಧಿಸಿದರೆ ಮಾತ್ರ ಮತದಾನ ನಡೆಯುತ್ತದೆ. ನಾಮಪತ್ರ ಹಿಂಪಡೆಯುವ ದಿನಾಂಕದ ನಂತರ ಅಭ್ಯರ್ಥಿಗಳಲ್ಲಿ ಒಬ್ಬರು ಮಾತ್ರ ಉಳಿದರೆ, ಅವರು ಅವಿರೋಧವಾಗಿ ಆಯ್ಕೆಯಾಗುತ್ತಾರೆ.