News Karnataka Kannada
Monday, April 29 2024
ಬೆಂಗಳೂರು

ಬೆಂಗಳೂರು: ಸಿದ್ದೇಶ್ವರ ಸ್ವಾಮೀಜಿಗಳ ಲಿಂಗೈಕ್ಯಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

Don't bribe anyone, don't take bribe: Dcm to officials
Photo Credit :

ಬೆಂಗಳೂರು: ನಡೆದಾಡುವ ದೇವರು, ಜ್ಞಾನ ಯೋಗಿ ಎಂದೇ ಖ್ಯಾತರಾಗಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಲಿಂಗೈಕ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

‘ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾದ ಸುದ್ದಿ ಕೇಳಿ ಮನಸ್ಸಿಗೆ ಬಹಳ ಬೇಸರವಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಗುಣಮುಖರಾಗಲಿ ಎಂದು ನಾನು ಸೇರಿದಂತೆ ಅವರ ಭಕ್ತವೃಂದ ದೇವರಲ್ಲಿ ಪ್ರಾರ್ಥನೆ ಮಾಡಿತ್ತು.

ತಮ್ಮ ಪ್ರವಚನಗಳ ಮೂಲಕ ಅಸಂಖ್ಯ ಮಂದಿಯ ಮನಪರಿವರ್ತನೆ ಜತೆಗೆ ಸಮಾಜದ ಬದಲಾವಣೆಗೆ ಕಾರಣರಾಗಿದ್ದ ಸ್ವಾಮೀಜಿಗಳು ಮಹಾನ್ ಮಾನವತಾವಾದಿಗಳು. ಅವರ ಪ್ರವಚನಗಳಿಂದ ಅನೇಕರು ಪ್ರಭಾವಿತರಾಗಿ, ಸ್ಫೂರ್ತಿ ಪಡೆದು ಸಮಾಜಸೇವೆಯಲ್ಲಿ ತಮ್ಮನ್ನೂ ತೊಡಗಿಸಿಕೊಂಡಿದ್ದಾರೆ. ಅವರ ಪ್ರವಚನಗಳಿಂದ ಪ್ರಭಾವಿತನಾಗಿ ನಾನೂ ಸಹ ಅವರ ಭಕ್ತಗಣ ಸೇರಿದ್ದೆ.

ಬಹುಭಾಷೆ ಪ್ರವೀಣರಾಗಿದ್ದ ಶ್ರೀಗಳು ದೇಶ-ವಿದೇಶಗಳಲ್ಲೂ ಭಕ್ತಸಮೂಹ ಹೊಂದಿದ್ದಾರೆ. ಅವರು ಬಿಟ್ಟು ಹೋಗಿರುವ ಮೌಲ್ಯಗಳು ಈ ಸಮಾಜಕ್ಕೊಂದು ದಾರಿದೀಪ.

ಸ್ವಾಮೀಜಿಗಳ ಅಗಲಿಕೆ ಇಡೀ ಮಾನವ ಕುಲಕ್ಕೇ ತುಂಬಲಾರದ ನಷ್ಟ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಅಸಂಖ್ಯ ಭಕ್ತರಿಗೆ ಭಗವಂತ ಕರುಣಿಸಲಿ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು