ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ ಜಿಲ್ಲೆಗೆ ಎರಡನೇ ಸ್ಥಾನ ಪ್ರಾಪ್ತವಾಗಿದೆ. 3ನೇಸ್ಥಾನ ಕೊಡಗು, ಉತ್ತರ ಕನ್ನಡ 4ನೇ ಸ್ಥಾನ ಗಳಿಸಿದೆ.
ಕಲಾ ವಿಷಯದಲ್ಲಿ ಜಯನಗರ ಕಾಲೇಜಿನ ವಿದ್ಯಾರ್ಥಿನಿ ರಾಜ್ಯದಲ್ಲಿ ತಬಸುಮ್ ಶೇಖ್ 593 ಅಂಕ ಪಡೆದು ಮೊದಲ ಸ್ಥಾನ ಪಡೆದಿದ್ದಾರೆ. ಅಂತೆಯೇ ವಾಣಿಜ್ಯ ವಿಭಾಗದಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಅನನ್ಯಾ 600 ಕ್ಕೆ 600 ಅಂಕ ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಕೋಲಾರ ಗಂಗೋತ್ರಿ ಕಾಲೇಜಿನ ಕೌಶಿಕ್ 596 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಅದೇರೀತಿ ವಿಜ್ಞಾನ ವಿಭಾಗದಲ್ಲಿ ಇನ್ನೊಬ್ಬ ವಿದ್ಯಾರ್ಥಿನಿ 596 ಅಂಕ ಪಡೆದಿದ್ದು ಈ ಕೆ ಜಯನಗರ ಆರ್.ವಿ. ಕಾಲೇಜು ವಿದ್ಯಾರ್ಥಿನಿ.
ಪರೀಕ್ಷೆಗೆ 727,923 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದು, ಈ ಪೈಕಿ 725,821 ಮಂದಿ ಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಸಂಖ್ಯೆ 23,754 ರಷ್ಟಿತ್ತು. ಪರೀಕ್ಷೆಗೆ ಹಾಜರಾದ 702,067 ವಿದ್ಯಾರ್ಥಿಗಳ ಪೈಕಿ 524,209 ಮಂದಿ ಉತ್ತೀರ್ಣರಾಗಿದ್ದಾರೆ.