ಬೆಂಗಳೂರು: ನಗರದ ಸಾರಕ್ಕಿ ಬಳಿಯಿರುವ ಪಾರ್ಕ್ನಲ್ಲಿ ಸುರೇಶ್ ಮತ್ತು ಅನುಷಾ ಎನ್ನುವ ಜೋಡಿ ಕೊಲೆ ಹಿಂದಿನ ಕಾರಣ ಬಯಲಾಗಿದೆ. ಮಗಳ ಕೊಲೆಗೆ ತಾಯಿ ಪ್ರತಿಕಾರ ತೀರಿಸಿಕೊಂಡಿದ್ದಾರೆ.
ಸುರೇಶ್ ಎನ್ನುವಾತ ಅನುಷಾಳನ್ನು ಕೊಲೆ ಮಾಡಿದ್ದರೆ, ಸುರೇಶ್ನನ್ನು ಅನುಷಾಳ ತಾಯಿ (ಗೀತಾ) ಕೊಲೆ ಮಾಡಿದ್ದಾರೆ. ಸುರೇಶ್ ಮತ್ತು ಅನುಷಾ ಇಬ್ಬರ ನಡುವೆ ಹಲವು ವರ್ಷಗಳಿಂದ ಪರಿಚವಿತ್ತು. ಅದು ಬೇರೆ ಸಂಬಂಧಕ್ಕೆ ತಿರುಗಿತ್ತು. ಸುರೇಶನಿಗೆ ಈಗಾಗಲೇ ಮದುವೆಯಾಗಿ ಮಕ್ಕಳಿದ್ದರು. ಆದರೂ ಸಹ ಸುರೇಶ್ ಅನುಷಾಳೊಂದಿಗೆ ಸಂಬಂಧ ಹೊಂದಿದ್ದ. ಆದ್ರೆ, ತಮ್ಮಿಬ್ಬರ ಸಂಬಂಧವನ್ನು ಮುಂದುವರೆಸುವುದು ಬೇಡ ಎಂದು ಅನುಷಾ ಹೇಳಿದ್ದಕ್ಕೆ ಸುರೇಶ್ ಕೋಪಗೊಂಡು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಬಳಿಕ ಅನುಷಾಳ ತಾಯಿ ಸುರೇಶನ ತಲೆಗೆ ಸಿಮೆಂಟ್ ಇಟ್ಟಿಗೆಯಿಂದ ಹೊಡೆದಿದ್ದಾಳೆ. ಪರಿಣಾಮ ಸುರೇಶ್ ಸಹ ಸಾವನ್ನಪ್ಪಿದ್ದಾನೆ. ಸದ್ಯ ಜೆಪಿ ನಗರ ಪೊಲೀಸರು ಅನುಷಾಳ ತಾಯಿ ಗೀತಾಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.